ಪುತ್ತೂರು ಫೆಬ್ರವರಿ 16: ಪುತ್ತೂರು ಮಹಿಳಾ ಕಾಲೇಜಿನಲ್ಲಿ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರು ರಸ್ತೆ ಬಂದ್ ಮಾಡಿ ದಿಢೀರ್ ಪ್ರತಿಭಟನೆ ನಡೆಸಿದರು. ಪ್ರತಿಭಟನ ಸ್ಥಳ ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ಬಿಜೆಪಿ ನಾಯಕರು ಆಗಮಿಸಿ ವಿದ್ಯಾರ್ಥಿನಿಯರ ಅಳಲು ಆಲಿಸಿದರು.

ಜಾಹೀರಾತು
ಪುತ್ತೂರು ನಗರದ ಮಧ್ಯೆ ಇರುವ ಮಹಿಳಾ ಕಾಲೇಜು ಇದಾಗಿದ್ದು, ಹೊಸ ಕಟ್ಟಡ ನಿರ್ಮಾಣವಾಗುತ್ತದೆ ಎಂದು ಹೇಳಿ ಪ್ರತಿವರ್ಷ ಹೇಳುತ್ತಾ ಇದ್ದರೂ ಇನ್ನೂ ಕಟ್ಟಡ ಕಾಮಗಾರಿ ಆಗಿಲ್ಲ. ಅಲ್ಲದೆ ವಿಧ್ಯಾರ್ಥಿನಿಯರಿಗೆ ಸರಿಯಾದ ತರಗತಿ ಇಲ್ಲದೆ ಪಾಠ ಕೇಳಬೇಕಾದ ಪರಿಸ್ಥಿತಿ ಇದೆ. ಅಲ್ಲದೆ ಪಕ್ಕದಲ್ಲೆ ಇರುವ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರದಿಂದಾಗಿ ಕಾಲೇಜಿನ ಸುತ್ತಮುತ್ತ ವಾಸನೆ ಹರಡುತ್ತಿದೆ ಎಂದು ವಿಧ್ಯಾರ್ಥಿನಿಯರು ಆರೋಪಿಸಿದ್ದಾರೆ.
ಈ ವೇಳೆ ಸ್ಥಳಕ್ಕೆ ಆಗಮಿಸಿದ ಪುತ್ತೂರು ಶಾಸಕ ಅಶೋಕ್ ರೈ ಪ್ರತಿಭಟನೆ ಮಾಡಲು ಅವಕಾಶ ನೀಡಿದ ಕಾಲೇಜು ಉಪನ್ಯಾಸಕರ ಜೊತೆಗೆ ವಾಗ್ವಾದ ನಡೆಸಿದರು. ಉಪನ್ಯಾಸಕರನ್ನು ತರಾಟೆಗೆ ತೆಗೆದುಕೊಂಡ ಶಾಸಕ ಅಶೋಕ್ ಕುಮಾರ್ ರೈ , ಕಾಲೇಜಿನ ಸಮಸ್ಯೆಗಳನ್ನು ನನ್ನ ಗಮನಕ್ಕೆ ಯಾಕೆ ತಂದಿಲ್ಲ ಎಂದು ತರಾಟೆಗೆ ತೆಗೆದುಕೊಂಡರು. ಈ ವೇಳೆ ವಿದ್ಯಾರ್ಥಿನಿಗಳ ಎದುರೇ ಶಾಸಕರಿಗೆ ಸಮಸ್ಯೆಯ ಬಗ್ಗೆ ಹಲವು ಬಾರಿ ಮನವಿ ಮಾಡಲಾಗಿದೆ ಎಂದರು. ಬಳಿಕ ಮಾತನಾಡಿದ ಶಾಸಕ ಅಶೋಕ್ ರೈ ತರಗತಿಗೆ ದೂಳು ಬರದಂತೆ ರಾತ್ರಿ ವೇಳೆ ಕಾಮಗಾರಿ ನಡೆಸಲು ತಿಳಿಸುತ್ತೆನೆ ಎಂದರು.
ಶಾಸಕರು ಗುತ್ತಿಗೆದಾರರಿಗೆ ಧೂಳಿನ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸುತಿದ್ದ ನಡುವೆ ಶಾಸಕ ಅಶೋಕ್ ಕುಮಾರ್ ರೈ ಅವರು ಪ್ರಾಂಶುಪಾಲೆ ವೇದಶ್ರೀ ನಿಡ್ಯ ಅವರನ್ನು ಇಲ್ಲಿ ಬಂದು ಸುಮ್ಮನೇ ಟೈಮ್ ವೇಸ್ಟ್ ಮಾಡುವುದು ಬೇಡ ಎಂದಾಗ ಗರಂ ಆದ ಪ್ರಾಂಶುಪಾಲೆಯು ನೀವು ನೋಡಿ ಮಾತನಾಡಬೇಕು. ಸುಮ್ಮನೆ ಹೇಳುವುದು ಬೇಡ ಎಂದು ಉತ್ತರಿಸಿದರು.
ಮುಂದಿನ 45 ದಿನಗಳಲ್ಲಿ ಬೊಳುವಾರಿನ ಹೊಸ ಕಟ್ಟಡಕ್ಕೆ ಕಾಲೇಜು ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗುವುದು. ಧೂಳಿನ ಸಮಸ್ಯೆ ಪರಿಹರಿಸಲು ಗುತ್ತಿಗೆದಾರರಿಗೆ ಸೂಚನೆ ನೀಡುತ್ತೇ ನೆ ಎಂದು ಶಾಸಕರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಹಿಂಪಡೆಯಲಾಯಿತು. ತಹಶೀಲ್ದಾರ್ ಕೂಡಲಗಿ, ಡಿವೈಎಸ್ಪಿ ಪ್ರಮೋದ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು

ಜಾಹೀರಾತು