ಪುತ್ತೂರು: ಪುತ್ತೂರು ಜನತೆಯ ಬಹುಕಾಲದ ಬೇಡಿಕೆಯಾಗಿರುವ ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಪೂರಕವಾಗಿ ಮೊದಲ ಹಂತದಲ್ಲಿ 300 ಹಾಸಿಗೆಗಳ ‘ಪುತ್ತೂರು ಮೆಡಿಕಲ್ ಹಾಸ್ಪಿಟಲ್’ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಫೆ.26ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ಸೂಚಿಸಲಾಗಿದೆ.
ಪುತ್ತೂರಿಗೆ ಬಹುನಿರೀಕ್ಷಿತ ಸರ್ಕಾರಿ ಮೆಡಿಕಲ್ ಕಾಲೇಜು ಈಗಾಗಲೇ ಮಂಜೂರಾಗಿದೆ.ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆಯನ್ನು ಉನ್ನತೀಕರಿಸಿ ಪ್ರಸಕ್ತ ವರ್ಷದಲ್ಲಿ ಕ್ರಮ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಕಳೆದ ಬಜೆಟ್ನಲ್ಲಿ ಘೋಷಿಸಿದ್ದರು.ಆ ಬಳಿಕ ಈ ಕುರಿತ ಪ್ರಕ್ರಿಯೆಗಳು ಹಂತಹಂತವಾಗಿ ನಡೆಯುತ್ತಿದ್ದು ಇದೀಗ 300 ಹಾಸಿಗೆಗಳ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ.ಮುಂದಿನ ಬೆಳವಣಿಗೆಯಾಗಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ಶೀಘ್ರವೇ ನಡೆಯಲಿದೆ.
ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣವಾಗಲಿರುವ ಬನ್ನೂರಿನಲ್ಲೇ 300 ಬೆಡ್ಗಳ ಆಸ್ಪತ್ರೆ ನಿರ್ಮಾಣ ಆಗಲಿದೆ.ಈ ನಿಟ್ಟಿನಲ್ಲಿ ಕಳೆದ ಕೆಲವು ತಿಂಗಳಿಂದ ಸಂಬಂಧಿಸಿದ ಪ್ರಕ್ರಿಯೆಗಳು ನಡೆಯುತ್ತಿದ್ದು ಕಳೆದ ವಾರವಷ್ಟೆ ಮಡಿಕೇರಿ ಸರಕಾರಿ ಮೆಡಿಕಲ್ ಕಾಲೇಜು ಡೀನ್ ಪುತ್ತೂರು ಭೇಟಿ ಮಾಡಿದ್ದರು.ಮೆಡಿಕಲ್ ಕಾಲೇಜಿಗಾಗಿ ಬನ್ನೂರಿನಲ್ಲಿ ಕಾಯ್ದಿರಿಸಿದ 40 ಎಕ್ರೆ ಜಾಗಕ್ಕೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.ಉನ್ನತ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸಿದ್ದರು.ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರು ವಿಚಾರದಲ್ಲಿ ಸರ್ಕಾರದ ಮೇಲೆ ನಿರಂತರ ಒತ್ತಡ ಹೇರಿದ್ದ ಶಾಸಕ ಅಶೋಕ್ ಕುಮಾರ್ ರೈಯವರು,ಕಳೆದ ಸಾಲಿನ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪುತ್ತೂರು ವೈದ್ಯಕೀಯ ಕಾಲೇಜು ಸ್ಥಾಪನೆಯ ಘೋಷಣೆ ಮಾಡಿದ ಬಳಿಕ ಬೆಂಗಳೂರಿನಲ್ಲಿ ಸಿಎಂ ಸಿದ್ಧರಾಮಯ್ಯ,ಡಿಸಿಎಂ ಡಿಕೆ ಶಿವಕುಮಾರ್,ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳನ್ನು ನಿರಂತರ ಭೇಟಿಯಾಗುತ್ತಾ,ಅಗತ್ಯ ಕ್ರಮಗಳಿಗಾಗಿ ಒತ್ತಡ ಹೇರುತ್ತಲೇ ಇದ್ದಾರೆ.
ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದ ಶಾಸಕರು ಮೆಡಿಕಲ್ ಕಾಲೇಜು ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಾರಂಭಿಕ 300 ಕೋಟಿ ರೂ.ಅನುದಾನವನ್ನು ತಕ್ಷಣ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು.ಮೆಡಿಕಲ್ ಕಾಲೇಜು ನಿರ್ಮಾಣದ ಮೊದಲು 400 ಬೆಡ್ನ ಆಸ್ಪತ್ರೆಯ ನಿರ್ಮಾಣವಾಗಬೇಕಿದೆ.ಆಸ್ಪತ್ರೆ ನಿರ್ಮಾಣವಾದ ಬಳಿಕ ಮೆಡಿಕಲ್ ಕಾಲೇಜು ಪ್ರಕ್ರಿಯೆ ಆರಂಭವಾಗಲಿದ್ದು ಆಸ್ಪತ್ರೆ ನಿರ್ಮಾಣಕ್ಕೆ 300 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡುವಂತೆ ಶಾಸಕರು ಮನವಿ ಮಾಡಿದ್ದರು.
ಆರ್ಥಿಕ ಇಲಾಖೆಯ ಅಪರ ಕಾರ್ಯದರ್ಶಿ ಹಿತೇಶ್ ಸಿಂಗ್, ಕಾರ್ಯದರ್ಶಿ ಪಿ.ಸಿ.ಜಾಫರ್ (ಬಜೆಟ್),ಪ್ರಧಾನ ಕಾರ್ಯದರ್ಶಿ ಎಂಟಇ ವೇಜು(ವೆಚ್ಚ) ಇವರ ಜೊತೆಯೂ ಶಾಸಕರು ಮಾತುಕತೆ ನಡೆಸಿದ್ದರು.ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣವಾಗುವಲ್ಲಿ ಇಲಾಖೆಯ ಅಽಕಾರಿಗಳ ಮುತುವರ್ಜಿಯೂ ಅಗತ್ಯವಾಗಿರುವುದರಿಂದ ಆರ್ಥಿಕ ಇಲಾಖೆಯ ಪ್ರಮುಖ ಅಧಿಕಾರಿಗಳ ಜೊತೆಯೂ ಶಾಸಕರು ಪ್ರತ್ಯ ಪ್ರತ್ಯೇಕವಾಗಿ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.ಈ ಎಲ್ಲ ಬೆಳವಣಿಗೆಗಳ ಫಲವಾಗಿ ಇದೀಗ 300 ಹಾಸಿಗೆಗಳ ಪುತ್ತೂರು ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಪುತ್ತೂರಿನಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಪೂರಕವಾಗಿ ಇದೀಗ ಮೊದಲ ಹಂತದಲ್ಲಿ 300 ಹಾಸಿಗೆಗಳ ಮೆಡಿಕಲ್ ಹಾಸ್ಪಿಟಲ್ಗೆ ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.ಇದು ದ.ಕ.ಜಿಲ್ಲೆಗೆ ಸಿಕ್ಕಿದ ಒಂದು ಬಹುನಿರೀಕ್ಷಿತ ಮತ್ತು ಬಹುದೊಡ್ಡ ಯೋಜನೆಯಾಗಿದೆ.ಈ ವರ್ಷದ ಬಜೆಟ್ಗಿಂತ ಮೊದಲು ಮೆಡಿಕಲ್ ಹಾಸ್ಪಿಟಲ್ಗೆ ಸಂಪುಟ ಅನುಮೋದನೆ ನೀಡಬೇಕು ಎನ್ನುವುದು ನಮ್ಮ ಅಪೇಕ್ಷೆಯಾಗಿತ್ತು.ಅದರಂತೆ ಇದೀಗ ಸಂಪುಟ ಅನುಮೋದನೆ ನೀಡಿದೆ.ಮುಂದೆ ಟೆಂಡರ್ ಪ್ರಕ್ರಿಯೆ ನಡೆದು ಕೆಲಸ ಆರಂಭಗೊಳ್ಳಲಿದೆ.ಮೆಡಿಕಲ್ ಕಾಲೇಜು ವಿಚಾರದಲ್ಲಿ ಅಪಹಾಸ್ಯ ಮಾಡಿದವರಿಗೆ ಈ ಮೂಲಕ ಉತ್ತರ ದೊರೆತಂತಾಗಿದೆ.ಮುಂದೆ ಪುತ್ತೂರು ಮೆಡಿಕಲ್ ಕಾಲೇಜನ್ನು ಬಜೆಟ್ನಲ್ಲಿ ನೀಡಿದರೆ ಸಾಕು


























