ಕರ್ನಾಟಕ ಬಿಜೆಪಿಯ ಪ್ರಭಾವಿ ಮತ್ತು ಬಂಡಾಯ ನಾಯಕ, ಇತ್ತೀಚೆಗಷ್ಟೇ ಪಕ್ಷದಿಂದ ಉಚ್ಛಾಟನೆಗೊಂಡಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ. ಬಿಜೆಪಿಗೆ ಸೇರಿಸಿಕೊಳ್ಳಿ ಎಂದು ನಾನು ಯಾರ ಮನೆ ಬಾಗಿಲಿಗೂ ಬಂದಿಲ್ಲ, ರಾಜ್ಯದಲ್ಲಿ ಹೊಸ ಪಕ್ಷ ಕಟ್ಟುವುದೇ ನಮ್ಮ ಮುಂದಿನ ಗುರಿ ಎಂದು ಗುಡುಗುವ ಮೂಲಕ ಕೇಸರಿ ಪಡೆಗೆ ನೇರ ಸವಾಲು ಹಾಕಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ನಾನು ದೆಹಲಿಗೆ ಬಂದಿರುವುದು ವೈಯಕ್ತಿಕ ವಿಚಾರಗಳಿಗಾಗಿ. ಪಕ್ಷಕ್ಕೆ ಮರಳಿ ಸೇರಿಸಿಕೊಳ್ಳಿ ಎಂದು ಹೈಕಮಾಂಡ್ ನಾಯಕರ ಕಾಲು ಹಿಡಿಯಲು ನಾನಿಲ್ಲಿಗೆ ಬಂದಿಲ್ಲ. ಸ್ವಾಭಿಮಾನಕ್ಕಿಂತ ದೊಡ್ಡದು ಯಾವುದೂ ಇಲ್ಲ ಎಂದು ಸ್ಪಷ್ಟಪಡಿಸಿದರು. ಬಿಜೆಪಿಯಿಂದ ಉಚ್ಛಾಟನೆಗೊಂಡ ನಂತರ ಅವರು ಹೈಕಮಾಂಡ್ ಭೇಟಿಗೆ ಪ್ರಯತ್ನಿಸುತ್ತಿದ್ದಾರೆ ಎಂಬ ಊಹಾಪೋಹಗಳಿಗೆ ಈ ಮೂಲಕ ತೆರೆ ಎಳೆದಿದ್ದಾರೆ.
ಯತ್ನಾಳ್ ಅವರ ಈ ನಿರ್ಧಾರದಿಂದ ಬಿಜೆಪಿಯ ಮತಬ್ಯಾಂಕ್ಗೆ ಧಕ್ಕೆ ಉಂಟಾಗಲಿದೆಯೇ ಎಂಬ ಚರ್ಚೆ ಈಗ ಶುರುವಾಗಿದೆ. ಪಂಚಮಸಾಲಿ ಸಮುದಾಯದ ಪ್ರಬಲ ನಾಯಕರಾಗಿರುವ ಯತ್ನಾಳ್, ಹೊಸ ಪಕ್ಷ ಕಟ್ಟಿದರೆ ಅದು ರಾಜ್ಯದ ಪ್ರಮುಖ ಪಕ್ಷಗಳಾದ ಬಿಜೆಪಿಗೆ ತಲೆ ನೋವು ತರಿಸಿದೆ



























