ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ
ಕೆಎಸ್ಆರ್ಟಿಸಿ ರಾಜಹಂಸ ಬಸ್ ಮತ್ತು ಸ್ವಿಫ್ಟ್ ಡಿಸೈರ್ ಕಾರಿನ ನಡುವೆ ನಡೆದ ಈ ಮುಖಾಮುಖಿ ಡಿಕ್ಕಿ, ಕ್ಷಣಾರ್ಧದಲ್ಲಿ ಸುಂದರ ಬದುಕನ್ನು ಛಿದ್ರಗೊಳಿಸಿದೆ. ಬೆಂಗಳೂರಿನಿಂದ ಕೊಕ್ಕಡ ಕಡೆಗೆ ಬರುತ್ತಿದ್ದ ಶಿಶಿಲ ಗ್ರಾಮದ ಧರ್ಮದಕಳ ನಿವಾಸಿ ಚಂದ್ರಶೇಖರ ಗೌಡ ರವರ ಕಾರು ಮತ್ತು ಧರ್ಮಸ್ಥಳದಿಂದ ಮದ್ಯಾಹ್ನ ಬೆಂಗಳೂರು ಮೂಲಕ ತಿರುಪತಿ ಹೊರಟಿರುವ ರಾಜಹಂಸ ಬಸ್ ಮಧ್ಯೆ ಶಿರಾಡಿ ಘಾಟ್ ಗಡಿ ಸಮೀಪ ಅಫಘಾತ ಸಂಭವಿಸಿದ್ದು ಕಾರಿನಲ್ಲಿ ಪ್ರಯಾನಿಸುತ್ತಿದ್ದ 3 ಜನ ಪ್ರಯಾಣಿಕರು ಮೃತಪಟ್ಟಿರುವ ಬಗ್ಗೆ ತಿಳಿದುಬಂದಿದೆ.

ಗುಂಡ್ಯದ ಗಡಿ ದೇವಸ್ಥಾನದ ಸಮೀಪ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಮೃತರನ್ನು ಶಿಶಿಲ ನಿವಾಸಿ ಚಂದ್ರಶೇಖರ್ ಗೌಡ , ಉಜಿರೆ ನಿವಾಸಿ ಶ್ರೀಧರ್ ,ಉಜಿರೆ ನಿವಾಸಿ ಜನಾರ್ದನ ಕೆರಿಮಾರ್
ಮೃತರಾದವರು. ಸುರೇಶ್ ಎಂಬವರಿಗೆ ಗಂಭೀರ ಗಾಯಗೊಂಡಿದ್ದಾರೆ.



























