ಪುತ್ತೂರು: 40ನೇ ವರ್ಷದ ಉಬಾರ್ ಕಂಬಳೋತ್ಸವವು ಉಪ್ಪಿನಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಜಾಗ ನೇತ್ರಾವತಿ ನದಿ ಕಿನಾರೆಯ ಕೂಟೇಲುವಿನಲ್ಲಿ ಮಾ.28ರಂದು ನಡೆಯಲಿದ್ದು, ಕಂಬಳ ಸಮಿತಿಯ ಅಧ್ಯಕ್ಷರೂ ಆಗಿರುವ ಶಾಸಕ ಅಶೋಕ್ ಕುಮಾರ್ ರೈ ಅವರ ಸಾರಥ್ಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಆಶೀರ್ವಾದದೊಂದಿಗೆ ಯಶಸ್ವಿಯಾಗಿ ನಡೆಯಲಿದೆ ಎಂದು ವಿಜಯ ವಿಕ್ರಮ ಜೋಡುಕರೆ ಕಂಬಳ ಸಮಿತಿ ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ.
ಈ ಭಾರಿ ವಿಶೇಷವಾಗಿ ಮಂಜೋಡಿಗೆ ನೆರಳಿಗಾಗಿ ಅತಿ ಎತ್ತರದ ಚಪ್ಪರವನ್ನು ಹಾಸಲಾಗಿದೆ ಮತ್ತು ಸಾಧಕರಿಗೆ ಸನ್ಮಾನ, ವಿಶೇಷ ಆಕರ್ಷಣೆಯಾಗಿ ಚಲನಚಿತ್ರ ನಟನಟಿಯರು ಆಗಮಿಸಲಿದ್ದಾರೆ ಎಂದವರು ಹೇಳಿದರು. ಮಾ.28ರಂದು ಬೆಳಗ್ಗೆ ಗಂಟೆ 8 ರಿಂದ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದಿಂದ ಮೆರವಣಿಗೆ ನಡೆಯಲಿದ್ದು, ಸಹಾಯಕ ಕಮೀಷನರ್ ಸ್ಟೆಲ್ಲಾ ವರ್ಗೀಸ್ ಅವರು ಮೆರವಣಿಗೆ ಉದ್ಘಾಟಿಸಲಿದ್ದಾರೆ. ಬಳಿಕ ಕಂಬಳಕರೆಯನ್ನು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ನಾೖಕ್ ಅವರು ಉದ್ಘಾಟಿಸಲಿದ್ದಾರೆ. ಈ ಸಂದರ್ಭ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಅಧ್ಯಕ್ಷತೆ ವಹಿಸಲಿದ್ದಾರೆ.
ಉಪ್ಪಿನಂಗಡಿ ಗ್ರಾ.ಪಂ ಮಾಜಿ ಅಧ್ಯಕ್ಷೆ ಲಲಿತಾ, ಉದ್ಯಮಿ ಧನ್ಯಕುಮಾರ್ ರೈ ಬಿಳಿಯೂರುಗುತ್ತು ಸಹಿತ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಸಂಜೆ ಗಂಟೆ 6ಕ್ಕೆ ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಸಭಾಪತಿ ಯು.ಟಿ.ಖಾದರ್, ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಸಂಸದ ಕ್ಯಾ| ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಐವನ್ ಡಿ.ಸೋಜ, ಮಾಜಿ ಸಚಿವ ಬಿ.ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ದಕ್ಷಿಣ ಕನ್ನಡ ಜಿಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕರಾ ರತ್ನ ಡಾ. ಎಂ.ಎನ್.ರಾಜೇಂದ್ರ ಕುಮಾರ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬಂಟ್ವಾಳ ಶಾಸಕ ರಾಜೇಶ್ ನಾಯಕ್, ಮಂಗಳೂರು ಪಶ್ಚಿಮ ಶಾಸಕ ವೇದವ್ಯಾಸ ಕಾಮತ್, ಉತ್ತರ ಶಾಸಕ ಭರತ್ ಶೆಟ್ಟಿ, ಕಾರ್ಕಳ ಶಾಸಕ ಸುನಿಲ್ ಕುಮಾರ್, ಮೂಡಬಿದರೆ ಶಾಸಕ ಉಮಾನಾಥ ಕೋಟ್ಯಾನ್, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಅಖಿಲ ಭಾರತ ಕುಸ್ತಿ ಫಡರೇಶನ್ ಬೆಂಗಳೂರು ಇದರ ಅಧ್ಯಕ್ಷ ಬಿ.ಗುಣರಂಜನ್ ಶೆಟ್ಟಿ ಬೆಳ್ಳಿಪ್ಪಾಡಿ, ಅದಾನಿ ಗ್ರೂಪ್ಸ್ನ ಸಹಅಧ್ಯಕ್ಷ ಕಿಶೋರ್ ಆಳ್ವ, ಉದ್ಯಮಿ ಪ್ರಮೋದ್ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಎಸ್.ಎಲ್.ವಿ. ಬುಕ್ಸ್ ಕಂಪೆನಿಯ ಅಧ್ಯಕ್ಷ ದಿವಾಕರ ದಾಸ್ ನೇರ್ಲಾಜೆ, ಎಸ್.ಜಿ ಕಾರ್ಪೋರೇಟ್ ಸಂಸ್ಥೆಯ ಅಧ್ಯಕ್ಷ ಸತ್ಯಶಂಕರ್ ಭಟ್, ಉದ್ಯಮಿ ಉಮೇಶ್ ನಾಡಾಜೆ, ಸಂಗೀತ ನಿರ್ದೇಶಕ ಗುರುಕಿರಣ್, ಮಾಜಿ ಶಾಸಕರಾದ ಶಕುಂತಳಾ ಶೆಟ್ಟಿ, ಸಂಜೀವ ಮಠಂದೂರು, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಅಧ್ಯಕ್ಷ ಪದ್ಮರಾಜ್ ಆರ್, ಪುತ್ತೂರು ಕೋಟಿಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕಮಾರ್ ರೈ ಬಾಲ್ಯೊಟ್ಟು, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಡಾ. ರಾಜಾರಾಮ್ ಕೆ.ಬಿ, ರಾಜ್ಯ ಕಂಬಳ ಅಸೋಸಿಯೇಶನ್ನ ಅಧ್ಯಕ್ಷ ಡಾ. ಬೆಳಪು ದೇವಿಪ್ರಸಾದ್ ಶೆಟ್ಟಿ, ಉದ್ಯಮಿ ಸಂತೋಷ್ ರೈ ನಳೀಲು, ಉದ್ಯಮಿ ಬಾಲಕೃಷ್ಣ ರೈ ತಿಪ್ಪಕೋಡಿ ಸಹಿತ ಅನೇಕ ಗಣ್ಯರು ಕಾರ್ಯಕ್ರಮದಲಿ ಭಾಗವಹಿಸಲಿದ್ದಾರೆ ಅವರು ಹೇಳಿದರು.
ಸಮಾರಂಭದಲ್ಲಿ ಚಲನಚಿತ್ರ ನಟ ನಟಿಯರು ವಿಶೇಷ ಆಕರ್ಷಣೆಯಾಗಲಿದ್ದಾರೆ. ಚಿತ್ರನಟಿ ಸುಕೃತ್ನಾಗ್, ಕನ್ನಡ ಮತ್ತು ತೆಲುಗು ಚಿತ್ರ ನಟ ವಷಿಷ್ಠ ಸಿಂಹ, ಬಿರ್ದ್ದ ಕಂಬಳ ಚಿತ್ರ ನಟ ಸ್ವರಾಜ್ ಶೆಟ್ಟಿ, ಸು ಫ್ರಮ್ ಸೋದ ಸನಿಲ್ ಗುರು, ಅರವಿಂದ ಬೋಳಾರ್, ಪುಷ್ಪರಾಜ್ ಬೊಳ್ಳಾರ್, ದಸ್ಕತ್ ಚಿತ್ರದ ನಟ ಭವ್ಯ ಪೂಜಾರಿ ಅವರು ಆಗಮಿಸಲಿದ್ದಾರೆ ಎಂದು ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು ಅವರು ಹೇಳಿದರು.
ಸಾಧಕರನ್ನು ಸನ್ಮಾನಿಸುವ ಕಾರ್ಯಕ್ರಮ ಆಯೋಜಿಸಿದ್ದು, ಉದ್ಯಮ ಕ್ಷೇತ್ರದಲ್ಲಿ ಮಾಸ್ಟರ್ ಪ್ಲಾನರಿ ಪುತ್ತೂರು ಇದರ ಮಾಲಕ ಎಸ್.ಕೆ.ಆನಂದ್, ಕಂಬಳ ಕ್ಷೇತ್ರದಲ್ಲಿ ಸದಾಶಿವ ಸಾಮಾನಿ ಸಂಪಿಗೆದಡಿ ಮಠಂತಬೆಟ್ಟು, ಕಂಬಳ ಮತ್ತು ಶಿಲ್ಪಶಾಸ್ತ್ರದಲ್ಲಿ ಬೆಳ್ಳಿಪ್ಪಾಡಿ ಕೊಡಪೊಟ್ಯ ಸುರೇಶ್ ಕೃಷ್ಣಯ್ಯ ಆಚಾರ್ಯ ಅವರನ್ನು ಸನ್ಮಾನಿಸಲಾಗುವುದು. ರಾಷ್ಟ್ರೀಯ ಜ್ಯೂನಿಯನ್ ಕಬಡ್ಡಿ ಚಾಂಪಿಯನ್ ಶಿಪ್ ಆಟಗಾರ ಅಧೀಶ್ ಶೆಟ್ಟಿ ಬರೆಮೇಲು ಅವರನ್ನು ಅಭಿನಂದಿಸಲಾಗುವುದು ಎಂದು ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು ಅವರು ಹೇಳಿದರು.
ಮಾ.29ರಂದು ಕಂಬೋಳತ್ಸವದ ಸಮಾರೋಪ ಸಮಾರಂಭ ನಡೆಯಲಿದ್ದು, ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ನಳಿನಿ ಪಿ ಶೆಟ್ಟಿ, ಉಪ್ಪಿನಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಲ್ಲಿಕಾ ಎ ಪೂಜಾರಿ, ನಿವೃತ್ತ ಯೋಧರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಚಂದಪ್ಪ ಮೂಲ್ಯ, ನ್ಯಾಯವಾದಿ ಮಹೇಶ್ ಕಜೆ, ಜಿಲ್ಲಾ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಕ ದಯಾನಂದ ರೈ ಕೋರ್ಮಂಡ, ತಹಶೀಲ್ದಾರ್ ಎಸ್.ಪಿ.ಕೂಡಲಗಿ, ಬಂಟ್ವಾಳ ತಹಸೀಲ್ದಾರ್ ಮಂಜುನಾಥ್, ಮಹಿಳಾ ಕಾಂಗ್ರೆಸ್ ಕಾರ್ಯಾಧ್ಯಕ್ಷೆ ಚಂದ್ರಪ್ರಭಾ ಗೌಡ, ಇಡ್ಕಿದು ಸೇವಾ ಸಹಕಾರಿ ಸಂಘ ಅಧ್ಯಕ್ಷ ಸುಧಾಕರ ಶೆಟ್ಟಿ, ಶ್ರೀರಾಮ ಶಾಲೆಯ ಸಂಚಾಲಕ ಯು.ಜಿ.ರಾಧಾ ಸಹಿತ ಹಲವಾರು ಮಂದಿ ಗಣ್ಯರು ಭಾಗವಹಿಸಲಿದ್ದಾರೆ ಎಂದು ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಕಂಬಳ ಸಮಿತಿ ಗೌರವಾಧ್ಯಕ್ಷ ನಂದಾವರ ಉಮೇಶ್ ಶೆಣೈ, ಪ್ರಧಾನ ಕಾರ್ಯದರ್ಶಿ ಕೇಶವ ಭಂಡಾರಿ ಬೆಳ್ಳಿಪ್ಪಾಡಿ ಕೈಪ, ಗೌರವ ಸಲಹೆಗಾರ ನಿರಂಜನ ರೈ ಮಠಂತಬೆಟ್ಟು, ಸಂಘಟನಾ ಕಾರ್ಯದರ್ಶಿ ಯೋಗೀಶ್ ಎಸ್.ಸಾಮಾನಿ ಸಂಪಿಗೆದಡಿ ಮಠಂತಬೆಟ್ಟು ಉಪಸ್ಥಿತರಿದ್ದರು.




























