ನಿರುದ್ಯೋಗಿ ಯುವಕರನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅತ್ಯಂತ ಕಟುವಾದ ಮತ್ತು ವಿಭಿನ್ನವಾದ ಶಬ್ದಗಳಲ್ಲಿ ಟೀಕಿಸಿದಾಗ ಸೃಷ್ಟಿಯಾದದ್ದೇ ಈ ‘ಕಾಕ್ರೋಚ್ ಜನತಾ ಪಾರ್ಟಿ’. ಪ್ರಮುಖ ಪ್ರಕರಣವೊಂದರ ಸುದೀರ್ಘ ವಿಚಾರಣೆಯ ಸಂದರ್ಭದಲ್ಲಿ, ನಿರುದ್ಯೋಗಿ ಯುವಕರ ಬಗ್ಗೆ ಮಾತನಾಡಿದ್ದರು. ಕೆಲವು ನಿರುದ್ಯೋಗಿ ಯುವಕರು ಜಿರಳೆ ಗಳಿದ್ದಂತೆ. ಉದ್ಯೋಗ ಮತ್ತು ಸ್ಥಾನಮಾನ ಸಿಗದಿದ್ದಾಗ ಅವರು ಆರ್ಟಿಐ (RTI) ಕಾರ್ಯಕರ್ತರು ಹಾಗೂ ಸಾಮಾಜಿಕ ಜಾಲತಾಣ ಬಳಕೆದಾರರ ಸೋಗಿನಲ್ಲಿ ಇಡೀ ವ್ಯವಸ್ಥೆಯ ಮೇಲೆ ದಾಳಿ ಮಾಡುತ್ತಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದರು.
ಈ ಹೇಳಿಕೆಗೆ ರಾಜಕೀಯ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ನಿರುದ್ಯೋಗಿ ಯುವಕರನ್ನು ಹೀಗೆ ಕರೆಯುವುದು ಸ್ವೀಕಾರಾರ್ಹವಲ್ಲ ಎಂದು ಹಲವು ನಾಯಕರು ಟೀಕಿಸಿದ್ದರು. ನಂತರ ಸ್ಪಷ್ಟನೆ ನೀಡಿದ ಸಿಜೆಐ, ಭಾರತೀಯ ಯುವಕರ ಬಗ್ಗೆ ನನಗೆ ಅಪಾರ ಗೌರವವಿದೆ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿಕೆ ನೀಡಿದ್ದರು.
ಕಳೆದ ಕೆಲವು ವರ್ಷಗಳಿಂದ, ಉದ್ಯೋಗ ಕೊರತೆ, ಸ್ಪರ್ಧಾತ್ಮಕ ಪರೀಕ್ಷೆಯ ಒತ್ತಡ, ಹೆಚ್ಚುತ್ತಿರುವ ಆರ್ಥಿಕ ಆತಂಕ, ಭ್ರಷ್ಟಾಚಾರ ಮತ್ತು ಸಾಂಸ್ಥಿಕ ಅಪನಂಬಿಕೆಗಳ ಕುರಿತು ಆನ್ಲೈನ್ ಸಂಭಾಷಣೆಗಳು ಯುವ ಭಾರತೀಯರಲ್ಲಿ ಹೆಚ್ಚಾಗಿ ಕಂಡುಬರುತ್ತಿವೆ ಈ ಸಮಯದಲ್ಲಿ ಹೊಸದೊಂದು ಚಳವಳಿಯೇ ಹುಟ್ಟಿಕೊಂಡಿದೆ.
ಆಡಳಿತ ಪಕ್ಷವು ತನಿಖಾ ಸಂಸ್ಥೆಗಳ ಭಯ ಹುಟ್ಟಿಸಿ ಇತರ ಪಕ್ಷಗಳ ನಾಯಕರನ್ನು ತನ್ನತ್ತ ಸೆಳೆದುಕೊಳ್ಳುತ್ತಿದೆ. ಹೀಗೆ ಪಕ್ಷಾಂತರ ಮಾಡಿ ಬರುವ ನಾಯಕರಿಂದಲೇ ಆಡಳಿತ ಪಕ್ಷವು ‘ಕಾಕ್ರೋಚ್ ಪಾರ್ಟಿ’ಯಾಗಿ ಬದಲಾಗುತ್ತಿದೆ ಎಂದು ವಿಪಕ್ಷಗಳು ಆರೋಪಿಸುತ್ತಿವೆ.

ಕಾಕ್ರೋಚ್ ಜನತಾ ಪಾರ್ಟಿ ಆರಂಭಿಸಿರುವ ಅಭಿಜೀತ್ ದೀಪ್ಕೆಗೆ ಇನ್ಸ್ಟಾಗ್ರಾಂನಲ್ಲಿ 12 ಮಿಲಿಯನ್ ಫಾಲೋವರ್ಸ್ ಇದ್ದಾರೆ.ಅಭಿಜೀತ್ ದೀಪ್ಕೆ ಎಕ್ಸ್ ಜಾಲತಾಣದಲ್ಲಿ ಸಕ್ರಿಯರಾಗಿರುವ ಒಬ್ಬ ಭಾರತೀಯ ಡಿಜಿಟಲ್ ಕಂಟೆಂಟ್ ಕ್ರಿಯೇಟರ್ ಮತ್ತು ರಾಜಕೀಯ ವಿಡಂಬನಾಕಾರ (Satirist). ಈತ ದೇಶದ ಪ್ರಚಲಿತ ರಾಜಕೀಯ ವಿದ್ಯಮಾನಗಳನ್ನು ಲೇವಡಿ ಮಾಡುತ್ತಾ ಪೋಸ್ಟ್ಗಳನ್ನು ಹಾಕುವ ಮೂಲಕ ನೆಟ್ಟಿಗರ ಗಮನ ಸೆಳೆದಿದ್ದಾರೆ.
ಕಾಕ್ರೋಚ್ ಜನತಾ ಪಾರ್ಟಿ ಪ್ರಸ್ತುತ ಭಾರತದಲ್ಲಿ ಕೇವಲ ಒಂದು ತಮಾಷೆಯ ಮೀಮ್ ಆಗಿ ಉಳಿಯದೆ, ಜೆನ್ ಝೀ (Gen Z – ಯುವ ಪೀಳಿಗೆ) ಯುವಕರ ಅತ್ಯಂತ ಶಕ್ತಿಶಾಲಿ ಡಿಜಿಟಲ್ ಪ್ರತಿಭಟನೆಯಾಗಿ ಮಾರ್ಪಡುತ್ತಿದೆ. ಕೇವಲ ಮೇ 16, 2026 ರಂದು ಆರಂಭವಾದ ಈ ಆನ್ಲೈನ್ ಮೂವ್ಮೆಂಟ್, ಕೆಲವೇ ದಿನಗಳಲ್ಲಿ ಇಂಟರ್ನೆಟ್ನಲ್ಲಿ ಬಿರುಗಾಳಿ ಎಬ್ಬಿಸಿದ್ದು, ದೇಶದ ಯುವಜನತೆಯ ಅಸಮಾಧಾನ ಮತ್ತು ಆಕ್ರೋಶವನ್ನು ಹೊರಹಾಕುವ ದೊಡ್ಡ ವೇದಿಕೆಯಾಗಿ ಮಾರ್ಪಟ್ಟಿದೆ.
ಆಮ್ ಆದ್ಮಿ ಪಕ್ಷದ ಮಾಜಿ ಸೋಶಿಯಲ್ ಮೀಡಿಯಾದಲ್ಲಿ ಕೆಲಸ ಮಾಡಿದ್ದ ಅಭಿಜೀತ್ ದೀಪ್ಕೆ ಆರಂಭಿಸಿದ ಈ ‘ಕಾಕ್ರೋಚ್ ಜನತಾ ಪಾರ್ಟಿ’, ಜೆನ್-ಝೀ ಯುವಕರಿಗೆ ಕನೆಕ್ಟ್ ಆಗುವ ಭಾಷೆಯಲ್ಲೇ ಮಾತನಾಡಲಾರಂಭಿಸಿತು. ಇತ್ತೀಚೆಗೆ ನಡೆದ NEET ಪರೀಕ್ಷೆಯ ಪೇಪರ್ ಲೀಕ್ ಹಗರಣದಿಂದ ಬೇಸತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳು ಈ ಮೂವ್ಮೆಂಟ್ನೊಂದಿಗೆ ಕೈಜೋಡಿಸಿದ್ದಾರೆ. ದೇಶದಲ್ಲಿ ಪದವೀಧರರ ನಿರುದ್ಯೋಗ ದರ ಹೆಚ್ಚುತ್ತಿರುವುದರ ವಿರುದ್ಧ ಯುವಕರು ಈ ವೇದಿಕೆಯಲ್ಲಿ ಆಕ್ರೋಶ ಹೊರಹಾಕುತ್ತಿದ್ದಾರೆ.
ಅವರ ಪೋಸ್ಟ್ಗೆ ಪ್ರತಿಕ್ರಿಯಿಸಿದ ಕೀರ್ತಿ ಆಜಾದ್, ನಾನು ಕಾಕ್ರೋಚ್ ಜನತಾ ಪಾರ್ಟಿಗೆ ಸೇರಲು ಬಯಸುತ್ತೇನೆ. ಇದಕ್ಕೆ ಅಗತ್ಯವಿರುವ ಅರ್ಹತೆಗಳೇನು? ಎಂದು ಪೋಸ್ಟ್ ಮಾಡಿದ್ದರು.
ಸುಳ್ಳು ಆಶ್ವಾಸನೆ ನೀಡಿ ಜನರನ್ನು ಮೋಸ ಮಾಡುವ ರಾಜಕಾರಣಿಗಳ ಅಂತ್ಯ ಸಾಮಾನ್ಯವಾಗಿ ಜನರ ತೀರ್ಪಿನಿಂದಲೇ ಆಗುತ್ತದೆ. ಚುನಾವಣೆಯಲ್ಲಿ ಸೋಲು, ಜನರ ನಂಬಿಕೆ ಕಳೆದುಕೊಳ್ಳುವುದು, ಭ್ರಷ್ಟಾಚಾರದ ಆರೋಪಗಳು ಮತ್ತು ಕಾನೂನು ಕ್ರಮಗಳು ಅವರ ರಾಜಕೀಯ ಬದುಕಿಗೆ ದೊಡ್ಡ ಹೊಡೆತ ನೀಡುತ್ತವೆ.
ಇತ್ತೀಚಿನ ರಾಜಕೀಯ ಚರ್ಚೆಗಳಲ್ಲಿ ಜನರು “ಮಾತಿಗಿಂತ ಕೆಲಸ ಮುಖ್ಯ” ಎಂದು ಒತ್ತಾಯಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮಗಳ ಮೂಲಕ ಸುಳ್ಳು ಭರವಸೆಗಳನ್ನು ಜನರು ಬೇಗ ಗುರುತಿಸುತ್ತಿದ್ದಾರೆ.

























