ಪುತ್ತೂರು: ತಾಲೂಕಿನ ಕೆಯ್ಯೂರು ಗ್ರಾಮದ ಮಾಡಾವು ಸಣಂಗಲ ದಿ.ಬಡುವನ್ ಕುಂಞಿ, ನಫೀಸಾ ದಂಪತಿಯ ಪುತ್ರಿ, ಮುಳ್ಳೇರಿಯ ಸಮೀಪದ ಪಳ್ಳಪ್ಪಾಡಿಯ ಜೈನುದ್ದೀನ್ ಅವರ ಪತ್ನಿ ಸೆರೆನಾ (27) ಅವರ ಮೃತದೇಹ ಮೇ.27ರಂದು ಸಂಜೆ ಮನೆ ಸಮೀಪದ ಶೆಡ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸೆರೆನಾ ಅವರ ಸಾವು ಅನುಮಾನಾಸ್ಪದವಾಗಿದೆ ಎಂದು ಸಹೋದರ ಅಬ್ದುಲ್ ರೆಹಮಾನ್ ಆರೋಪಿಸಿದ್ದು, ಅವರು ನೀಡಿದ ದೂರಿನ ಮೇರೆಗೆ ಆದೂರು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

























