ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಆಡಳಿತ ಮಂಡಳಿಗೆ ಪುತ್ತೂರು ತಾಲ್ಲೂಕು ಕೋಡಿಂಬಾಡಿ ಗ್ರಾಮದ ಜಗನ್ನಾಥ ಶೆಟ್ಟಿ ನಡುಮನೆ ಅವರನ್ನು ಅಧಿಕಾರೇತರ ಸದಸ್ಯರನ್ನಾಗಿ ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಿ ಆದೇಶಿಸಿದೆ.
ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು (KMF) ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ. ಕೋಡಿಂಬಾಡಿ ಹಾಲು ಉತ್ಪಾದಕರ ಸಂಘ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959ರ ಪ್ರಕರಣ 28ಎ ಉಪ ಪ್ರಕರಣ (4ಬಿ)(1)ರ ಮೇರೆಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರ ಈ ಆದೇಶ ಹೊರಡಿಸಿದೆ. ನಾಮನಿರ್ದೇಶನವು ಕೂಡಲೇ ಜಾರಿಗೆ ಬರಲಿದ್ದು, ಸರ್ಕಾರದ ಮುಂದಿನ ಆದೇಶದವರೆಗೆ ಮುಂದುವರಿಯಲಿದೆ.ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಸಹಕಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ-3 ರಂಗನಾಥ ಜಿ. ಅವರು ಮೇ 30ರಂದು ಅಧಿಸೂಚನೆ ಹೊರಡಿಸಿದ್ದಾರೆ.

























