ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಪುತ್ತೂರಿನ ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಕ್ಕಳನ್ನು ಶಾಲೆಗೆ ಬರಮಾಡಿಕೊಳ್ಳುವ ಮೂಲಕ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಶಾಸಕರು ಶಾಲೆಗೆ ಹೊಸದಾಗಿ ನಿರ್ಮಿಸಲಾದ ಶಾಲಾ ಕೊಠಡಿ ಮತ್ತು ಕಿಂಡರ್ ಗಾರ್ಡನ್ ಅನ್ನೂ ಉದ್ಘಾಟಿಸಿದರು.
ರಜಾ ಮಜಾದ ಬಳಿಕ ಶಾಲೆಗೆ ಆಗಮಿಸಿದ ಮಕ್ಕಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಶಾಲಾ ಶಿಕ್ಷಕರು ಮಕ್ಕಳನ್ನು ಶಾಲೆಗೆ ಬರಮಾಡಿಕೊಂಡರು. ಸರಕಾರ ರಾಜ್ಯದೆಲ್ಲೆಡೆ ಕೆಪಿಎಸ್ ಶಾಲೆಗಳನ್ನು ಆರಂಭಿಸಲಿದ್ದು, ಖಾಸಗಿ ಶಾಲೆಯಲ್ಲಿ ಸಿಗುವ ಎಲ್ಲಾ ಸೌಲಭ್ಯಗಳನ್ನು ಸರಕಾರಿ ಶಾಲೆಯಲ್ಲಿ ನೀಡಲಿದೆ. ಈಗಾಗಲೇ ಸುಮಾರು 15 ಸಾವಿರ ವಿಷಯಾಧಾರಿತ ನುರಿತ ಶಿಕ್ಷಕರನ್ನು ನೇಮಕ ಮಾಡಲು ಎಲ್ಲಾ ಕ್ರಮಗಳನ್ನು ಕೈಗೊಂಡಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಮಾಹಿತಿ ನೀಡಿದರು.

























