ಪುತ್ತೂರು: ಟೀಂ ಉಬಾರ್ ನೇತೃತ್ವದಲ್ಲಿ 2ನೇ ವರ್ಷದ ಹಲಸು- ಮಾವು ಮೇಳ ಜೂನ್ 19ರಿಂದ 21ರವರೆಗೆ ಉಪ್ಪಿನಂಗಡಿಯ ಎಚ್.ಎಂ. ಆಡಿಟೋರಿಯಂನಲ್ಲಿ ನಡೆಯಲಿದೆ ಎಂದು ಟೀಂ ಉಬಾರ್ ತಂಡದ ರಂಗಯ್ಯ ಬಳ್ಳಾಲ್ ಕೆದಂಬಾಡಿ ಬೀಡು ಹೇಳಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 19ರಂದು ಬೆಳಗ್ಗೆ 9 ಗಂಟೆಗೆ ಶಾಸಕ ಅಶೋಕ್ ರೈ ಮೇಳ ಉದ್ಘಾಟಿಸಲಿದ್ದಾರೆ. ಪ್ರಣವ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷö ಜಿ.ಆರ್. ಪ್ರಸಾದ್, ಇಳಂತಿಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅ ಕಾರಿ ಶ್ರವಣ್ ಕುಮಾರ್, ಹಿಂದೂ ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷö ಯು.ಟಿ. ತೌಸಿಫ್, ಸುದ್ದಿ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಡಾ.ಯು.ಪಿ. ಶಿವಾನಂದ್, ಉಪ್ಪಿನಂಗಡಿ ಗ್ರಾಪಂ ಮಾಜಿ ಸದಸ್ಯ ಧನಂಜಯ ಕುಮಾರ್ ಭಾಗವಹಿಸಲಿದ್ದಾರೆ ಎಂದರು.
ಹಲಸು ಮಾವು ಮೇಳದ ಸಮಾರೋಪದ ಸಂದರ್ಭದಲ್ಲಿ ಜೂನ್ 21ರಂದು ಸಂಜೆ 5 ಗಂಟೆಗೆ ಮಂಗಳೂರಿನ ಚಾ ಪರ್ಕ ತಂಡದ ಯಾನೊರಿ ಬರೊಲಿಯಾ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಳ್ಳಲಿದೆ.
ಅಂದು ಮಧ್ಯಾಹ್ನ ಉಚಿತ ಕಣ್ಣಿನ ಪರೀಕ್ಷಾö ಶಿಬಿರವು ಪುತ್ತೂರಿನ ವಿಶನ್ ಐ ಕೇರ್ ಆಪ್ಟಿಕಲ್ಸ್ ಸಹಯೋಗದಲ್ಲಿ ನಡೆಯಲಿದೆ ಎಂದು ವಿವರಿಸಿದರು.
ಟೀಂ ಉಬಾರ್ ತಂಡದ ರಾಜೇಶ್ ಪ್ರಭು ಮತ್ತು ರಾಕೇಶ್ ಪ್ರಭು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

























