ಬಿಹಾರ್: ಭರತ್ ಭೂಷಣ್ ತಿವಾರಿ ಎನ್ಕೌಂಟರ್ಗೆ ಸಂಬಂಧಿಸಿದಂತೆ ಬಿಹಾರದ ಭೋಜ್ಪುರ ಜಿಲ್ಲಾ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.ಯಾವುದೇ ಅಪರಾಧ ಹಿನ್ನೆಲೆ ಹೊಂದಿರದ ಮತ್ತು ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದ ವ್ಯಕ್ತಿಯ ಪೊಲೀಸ್ ಎನ್ಕೌಂಟರ್ ಬಗ್ಗೆ ಆಡಳಿತಾರೂಢ ಪಕ್ಷದ ನಾಯಕರು ಸೇರಿದಂತೆ ಹಲವರು ಪ್ರಶ್ನೆಗಳನ್ನು ಎತ್ತಿದ್ದಾರೆ. ಈ ಘಟನೆಯು ಇಡೀ ಪ್ರದೇಶದಲ್ಲಿ ತೀವ್ರ ಸಾರ್ವಜನಿಕ ಆಕ್ರೋಶ ಮತ್ತು ಪ್ರತಿಭಟನೆಗಳಿಗೆ ಕಾರಣವಾಗಿದೆ.
ನ್ಕೌಂಟರ್ನಲ್ಲಿ ಸಾವಿಗೀಡಾದ ಭರತ್ ತಾಯಿ ಸಲ್ಲಿಸಿದ ಲಿಖಿತ ದೂರಿನ ಆಧಾರದ ಮೇಲೆ ಶಹಪುರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಗದೀಶ್ಪುರ ಎಸ್ಡಿಪಿಒ, ಎಸ್ಎಚ್ಒ ಮತ್ತು ಘಟನೆಗೆ ಸಂಬಂಧಿಸಿದ ಇತರ ಪೊಲೀಸ್ ಸಿಬ್ಬಂದಿಯನ್ನು ಪ್ರಕರಣದಲ್ಲಿ ಹೆಸರಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.
ಬಿಹಾರದ ಭೋಜ್ಪುರ ಜಿಲ್ಲೆಯ ಬಿಲಾವೊಟಿ ಗ್ರಾಮದಲ್ಲಿ ನಡೆದ 26 ವರ್ಷದ ಸೋಷಿಯಲ್ ಮೀಡಿಯಾ ಆಕ್ಟಿವಿಸ್ಟ್ ಭರತ್ ಭೂಷಣ್ ತಿವಾರಿ ಅವರ ಪೊಲೀಸ್ ಎನ್ಕೌಂಟರ್, ಪ್ರಸ್ತುತ ದೇಶಾದ್ಯಂತ ಭಾರಿ ವಿವಾದ ಹಾಗೂ ರಾಜಕೀಯ ಬಿರುಗಾಳಿಯನ್ನು ಎಬ್ಬಿಸಿದೆ.
ಯಾವುದೇ ಕ್ರಿಮಿನಲ್ ಹಿನ್ನೆಲೆ ಇಲ್ಲದ ಮತ್ತು ಸ್ಥಳೀಯರ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತುತ್ತಿದ್ದ ಯುವಕನನ್ನು ಪೊಲೀಸರು ನಕಲಿ ಎನ್ಕೌಂಟರ್ ಮೂಲಕ ಕೊಂದಿದ್ದಾರೆ ಎಂದು ಕುಟುಂಬಸ್ಥರು ಹಾಗೂ ಸಾರ್ವಜನಿಕರು ಗಂಭೀರ ಆರೋಪ ಮಾಡಿದ್ದಾರೆ
ಜೂ.17 ರಂದು ನಡೆದ ಎನ್ಕೌಂಟರ್ನಲ್ಲಿ ಶಹಪುರ್ ಪೊಲೀಸ್ ಠಾಣೆ ಪ್ರದೇಶದ ಬಿಲೌಟಿ ಗ್ರಾಮದ ನಿವಾಸಿ ಭರತ್ ಹತ್ಯೆಯಾಗಿದ್ದ. ಈ ಘಟನೆ ಭಾರೀ ಚರ್ಚೆಗೆ ಕಾರಣವಾಗಿತ್ತು. ಪೊಲೀಸರ ಬಲಪ್ರಯೋಗದ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ರಾಜ್ಯ ಸರ್ಕಾರ ಜೂ.20 ರಂದು ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು.
ಕೊಲೆ ಪ್ರಕರಣ ದಾಖಲು (FIR): ಭರತ್ ತಿವಾರಿ ತಾಯಿಯ ದೂರಿನ ಮೇರೆಗೆ ಜಗದೀಶ್ಪುರದ ಎಸ್ಡಿಪಿಒ (SDPO) ರಾಜೇಶ್ ಶರ್ಮಾ, ಅಮಾನತುಗೊಂಡ ಎಸ್ಎಚ್ಒ ರಾಜೇಶ್ ಮಾಲಾಕರ್ ಮತ್ತು ಇತರ ಮೂವರು ಪೊಲೀಸರ ವಿರುದ್ಧ ಹತ್ಯೆ (IPC 302/ಹೊಸ ಕಾಯ್ದೆ ಅನ್ವಯ) ಮತ್ತು ಇತರ ಗಂಭೀರ ಸೆಕ್ಷನ್ಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ
ಈ ಕಸ್ಟಡಿಯಲ್ ಹತ್ಯೆ ಅಥವಾ ನಕಲಿ ಎನ್ಕೌಂಟರ್ ಕುರಿತು ಸ್ವತಂತ್ರ ಸಿಬಿಐ (CBI) ತನಿಖೆ ನಡೆಸಬೇಕು ಮತ್ತು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕೋರಿ ಸುಪ್ರೀಂ ಕೋರ್ಟ್ ಹಾಗೂ ಪಾಟ್ನಾ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (PIL) ಸಲ್ಲಿಕೆ ಮಾಡಲಾಗಿದೆ.
ಭರತ್ ತಿವಾರಿ ಸ್ಥಳೀಯವಾಗಿ ಪ್ರವಾಹ, ಭ್ರಷ್ಟಾಚಾರ ಮತ್ತು ಬಡವರ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಸಾಮಾಜಿಕ ಕಾರ್ಯಕರ್ತನಾಗಿದ್ದರಿಂದ, ಆತನ ನಿವಾಸಕ್ಕೆ ಪ್ರಶಾಂತ್ ಕಿಶೋರ್ ಹಾಗೂ ಹಲವಾರು ಬಿಜೆಪಿ ನಾಯಕರು ಸೇರಿದಂತೆ ವಿರೋಧ ಪಕ್ಷದ ಪ್ರಮುಖರು ಭೇಟಿ ನೀಡಿ ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ. ಬಿಲಾವೊಟಿ ಗ್ರಾಮದಲ್ಲಿ ಭಾರಿ ಜನಸ್ತೋಮದೊಂದಿಗೆ ಮಹಾಪಂಚಾಯತ್ ಕೂಡ ಆಯೋಜಿಸಲಾಗಿದೆ
ತಿವಾರಿ ಅವರ ಕುಟುಂಬ ಪಾಟ್ನಾದಲ್ಲಿ ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರನ್ನು ಭೇಟಿ ಮಾಡಿ ನ್ಯಾಯಕ್ಕಾಗಿ ತಮ್ಮ ಹೋರಾಟಕ್ಕೆ ಬೆಂಬಲ ಕೋರಿದೆ. ಜೂ.24 ರಂದು ನಿಗದಿಯಾದ ಪಂಚಾಯತ್ ಸಭೆಯಲ್ಲಿ ಭಾಗವಹಿಸುವಂತೆ ಕುಟುಂಬವು ಕಿಶೋರ್ ಅವರಿಗೆ ಮನವಿ ಮಾಡಿದೆ. ನ್ಯಾಯಕ್ಕಾಗಿ ಅವರ ಹೋರಾಟದಲ್ಲಿ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುವುದಾಗಿ ಕಿಶೋರ್, ಭರತ್ ಕುಟುಂಬಕ್ಕೆ ಭರವಸೆ ನೀಡಿದ್ದಾರೆ.
ಎನ್ಕೌಂಟರ್ ಬಳಿಕ ಪೊಲೀಸರು ತಮ್ಮ ಆರಂಭಿಕ ಹೇಳಿಕೆಯಲ್ಲಿ ತಿವಾರಿ ಅವರನ್ನು “ಮಾನಸಿಕವಾಗಿ ಅಸ್ವಸ್ಥ” ಎಂದು ಕರೆದಿದ್ದರು. ಆದಾಗ್ಯೂ, ಅವರ ಕುಟುಂಬ ಸದಸ್ಯರು ಮತ್ತು ಇತರರು ಅವರನ್ನು ಸಾಮಾಜಿಕ ಕಾರ್ಯಕರ್ತ ಎಂದು ಬಣ್ಣಿಸಿದ್ದಾರೆ. ಭರತ್ ತಿವಾರಿ ಸರ್ಕಾರದ ವಿರುದ್ಧ ನಿರಂತರವಾಗಿ ಪ್ರಶ್ನೆಗಳನ್ನು ಎತ್ತುತ್ತಿದ್ದ ಎನ್ನಲಾಗಿದೆ.
ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ಒಂದು ವೀಡಿಯೊದಲ್ಲಿ ಎನ್ಕೌಂಟರ್ಗೂ ಮೊದಲು ತಿವಾರಿ ತನ್ನ ಕೈಯಲ್ಲಿದ್ದ ಆಯುಧವನ್ನು ಎಸೆಯುತ್ತಿರುವುದು ದಾಖಲಾಗಿದೆ. ಈ ವಿಡಿಯೋ ಬಗೆಗಿನ ಸತ್ಯಾಸತ್ಯತೆ ಪರಿಶೀಲನೆ ಹಂತದಲ್ಲಿದೆ. ಇನ್ನೂ, ತಿವಾರಿ ಪೊಲೀಸ್ ಸಿಬ್ಬಂದಿಯ ಮೇಲೆ ಪದೇ ಪದೇ ಗುಂಡು ಹಾರಿಸಿದ್ದು, ಇದರಿಂದ ಆತ್ಮರಕ್ಷಣೆಗಾಗಿ ಪ್ರತಿದಾಳಿ ನಡೆಸಿದ್ದಾಗಿ ಪೊಲೀಸರು ತಿಳಿಸಿದ್ದರು.






















