ಶಾರುಖ್ ಖಾನ್ಗೆ ಮಂಗಳೂರು ಕೇವಲ ಒಂದು ನಗರವಲ್ಲ, ಅದೊಂದು ಭಾವನಾತ್ಮಕ ನಂಟು. ಈ ಹಿಂದೆ ಅನೇಕ ಕಾರ್ಯಕ್ರಮಗಳಲ್ಲಿ ತಮ್ಮ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದ ಶಾರುಖ್, ತಾನು ಬೆಳೆದಿದ್ದು ಮಂಗಳೂರಿನಲ್ಲೇ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದರು. ಶಾರುಖ್ ಅವರ ಅಜ್ಜ 1960ರ ದಶಕದಲ್ಲಿ ಮಂಗಳೂರು ಬಂದರಿನಲ್ಲಿ ಮುಖ್ಯ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಆ ಸಮಯದಲ್ಲಿ ಶಾರುಖ್ ಅವರ ಬಾಲ್ಯದ ಐದು ವರ್ಷಗಳು ಅಜ್ಜಿಯ ಆರೈಕೆಯಲ್ಲಿ ಮಂಗಳೂರಿನಲ್ಲೇ ಕಳೆದಿದ್ದವು. “ನಾನು ಮಂಗಳೂರಿನ ಮಗ” ಎಂದು ಶಾರುಖ್ ಸಾರ್ವಜನಿಕ ವೇದಿಕೆಯಲ್ಲಿ ಹೇಳಿರುವುದು ಕರಾವಳಿ ಜನರ ಪಾಲಿಗೆ ಹೆಮ್ಮೆಯ ವಿಷಯವಾಗಿದೆ.
ರೋಹನ್ ಕಾರ್ಪೊರೇಶನ್ನ ಬ್ರ್ಯಾಂಡ್ ಅಂಬಾಸಿಡರ್ ಆಗಿರುವ ಶಾರುಖ್ ಖಾನ್, ಕಂಪನಿಯ ಆಹ್ವಾನದ ಮೇರೆಗೆ ಆಗಮಿಸುತ್ತಿದ್ದಾರೆ. ಅಡ್ಯಾರ್ ಗಾರ್ಡನ್ನಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಸಂಜೆ 4 ಗಂಟೆಯಿಂದ ಪ್ರವೇಶ ಆರಂಭವಾಗಲಿದೆ. ಸಮಾಜದ ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು ಮತ್ತು ಆಹ್ವಾನಿತರು ಮಾತ್ರ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸೀಮಿತ ಸಂಖ್ಯೆಯ ಜನರಿಗೆ ಮಾತ್ರ ಅವಕಾಶವಿದ್ದರೂ, ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಶಾರುಖ್ ಅವರನ್ನು ನೋಡಲು ಬರುವ ನಿರೀಕ್ಷೆಯಿದೆ.






















