ಪುತ್ತೂರು: ರಸ್ತೆ ದುರಸ್ತಿಗೆ ಆಗ್ರಹಿಸಿ ನೀಡಿದ ಮನವಿಗೆ ಸ್ಪಂದಿಸಿ ನೀಡಿದ ಭರವಸೆಯನ್ನು ಈಡೇರಿಸದೇ ಇರುವುದನ್ನು ಪ್ರತಿಭಟಿಸಿ ಜುಲೈ 30ರಂದು ನರಿಮೊಗರು ಗ್ರಾಮ ಪಂಚಾಯತ್ ಮುಂಭಾಗ ಪುತ್ತಿಲ ಪರಿವಾರದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.
ಜುಲೈ 27ರಂದು ರಸ್ತೆ ತಡೆ ಮಾಡಿ ಯೋಗ್ಯ ರಸ್ತೆ ನಿರ್ಮಣ ಮಾಡಲು ಪ್ರತಿಭಟನೆ ನಡೆಸಿದಾಗ ಇಲಾಖೆಯ ಪರವಾಗಿ ಪಂಚಾಯತ್ ಕಾರ್ಯದರ್ಶಿ ಅವರು ಸ್ಥಳಕ್ಕೆ ಆಗಮಿಸಿ ಮೇಲಾಧಿಕಾರಿಗಳ ಮನವಿಯಂತೆ ಎರಡು ದಿನದ ಕಾಲಾವಕಾಶವನ್ನು ಕೇಳಿದ್ದರು. ಜುಲೈ 29ರೊಳಗೆ ಮನವಿಗೆ ಸ್ಪಂದಿಸದೇ ಇದ್ದಲ್ಲಿ, ಜುಲೈ 30ರಂದು ಪ್ರತಿಭಟನೆ ನಡೆಸುವುದಾಗಿ ತಿಳಿಸಲಾಗಿತ್ತು. ಅದರಂತೆ ಇದೀಗ ನರಿಮೊಗರು ಗ್ರಾಪಂ ಮುಂಭಾಗ ಸಾರ್ವಜನಿಕರ ಜೊತೆ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
























