ಪುತ್ತೂರು: ಕೋಡಿಂಬಾಡಿ ಒಕ್ಕಲಿಗ ಗೌಡ ಸೇವಾ ಸಂಘ, ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟ ಮತ್ತು ಒಕ್ಕಲಿಗ ಗೌಡ ಯುವ ಘಟಕ ಹಾಗೂ ಮಹಿಳಾ ಘಟಕದ ನೇತ್ರತ್ವದಲ್ಲಿ ಒಕ್ಕಲಿಗ ಗೌಡರ ಆಟಿ ಕಾರ್ಯಕ್ರಮ ಆ 16 ರಂದು ಸುಂದರ ಗೌಡ ನಿಡ್ಯ ಇವರ ಮನೆಯಲ್ಲಿ ನಡೆಯಲಿದೆ. ಬೆಳಿಗ್ಗೆ 9.30 ಕ್ಕೆ ಕಾರ್ಯಕ್ರಮ ಉದ್ಘಾಟನೆಗೊಂಡು ಅನಂತರ ಅಂಗನವಾಡಿ ಮಕ್ಕಳಿಗೆ, ಬಾಲಕ ಬಾಲಕಿಯರಿಗೆ, ಪುರುಷರಿಗೆ, ಮಹಿಳೆಯರಿಗೆ ಹಾಗೂ ಹಿರಿಯರಿಗೆ ವಿವಿಧ ಆಟೋಟ ಸ್ಪರ್ಧೆ ನಡೆಯಲಿದೆ.
ಮಧ್ಯಾಹ್ನ 12 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು,ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ನಡೆಯಲಿದೆ, ಮಕ್ಕಳಿಗೆ ಪುಸ್ತಕ ವಿತರಣೆ ನಡೆಯಲಿದೆ, ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಿಬಾ0ಡಿ ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟದ ದಯಾನಂದ ಗೌಡ ಬೋಳಾಜೆ ವಹಿಸಲಿದ್ದು,ಸಂಪನ್ಮೂಲ ವ್ಯಕ್ತಿಯಾಗಿ ಬನ್ನೂರು ಎವಿಜಿ ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿ ಗುಡ್ಡಪ್ಪ ಗೌಡ ಬಲ್ಯ ಭಾಗವಹಿಸಲಿದ್ದು,ಮುಖ್ಯ ಅತಿಥಿಗಳಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಸಂಜೀವ ಮಠ೦ದೂರು, ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷರು ಸುಂದರ ಗೌಡ ನಡುಬೈಲು, ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನ ಅಧ್ಯಕ್ಷರು ವಿಶ್ವನಾಥ ಗೌಡ ಬನ್ನೂರು, ಸ್ಥಾಪಕ ಅಧ್ಯಕ್ಷರು ಎ. ವಿ ನಾರಾಯಣ್,ತಾಲೂಕು ಯುವ ಘಟಕದ ಅಧ್ಯಕ್ಷರು ಪ್ರಶಾಂತ್ ಕೆಮ್ಮಾಯಿ,ತಾಲೂಕು ಮಹಿಳಾ ಘಟಕದ ಸಂಧ್ಯಾ ಶಶಿಧರ್ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಮಾಜ ಬಾ೦ಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಒಕ್ಕಲಿಗ ಗೌಡ ಗ್ರಾಮ ಸಮಿತಿಯ ಅಧ್ಯಕ್ಷರು ವಾಸಪ್ಪ ಗೌಡ, ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟ ಅಧ್ಯಕ್ಷರು ದಯಾನಂದ ಗೌಡ, ಯುವ ಘಟಕದ ಬಾಲಕೃಷ್ಣ ಗೌಡ ಕಾಪು, ಮಹಿಳಾ ಘಟಕದ ಲೀಲಾವತಿ ಮೇಲಿನಹಿತ್ತಿಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
























