• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಇಡೀ ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ  ಮಹಾ ಪ್ರವಾಹಕ್ಕೆ  50 ವರ್ಷ,ಅವತ್ತು ಇಡೀ ಉಪ್ಪಿನಂಗಡಿ ಜಲಮಯವಾಗಿತ್ತು.

ಇಡೀ ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ಮಹಾ ಪ್ರವಾಹಕ್ಕೆ 50 ವರ್ಷ,ಅವತ್ತು ಇಡೀ ಉಪ್ಪಿನಂಗಡಿ ಜಲಮಯವಾಗಿತ್ತು.

July 26, 2024
ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

September 1, 2026
ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

September 1, 2026
ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

September 1, 2026
ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

September 1, 2026
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, September 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಇಡೀ ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ಮಹಾ ಪ್ರವಾಹಕ್ಕೆ 50 ವರ್ಷ,ಅವತ್ತು ಇಡೀ ಉಪ್ಪಿನಂಗಡಿ ಜಲಮಯವಾಗಿತ್ತು.

by ಪ್ರಜಾಧ್ವನಿ ನ್ಯೂಸ್
July 26, 2024
in ಜಿಲ್ಲೆ, ದಕ್ಷಿಣ ಕನ್ನಡ, ರಾಜ್ಯ
0
ಇಡೀ ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ  ಮಹಾ ಪ್ರವಾಹಕ್ಕೆ  50 ವರ್ಷ,ಅವತ್ತು ಇಡೀ ಉಪ್ಪಿನಂಗಡಿ ಜಲಮಯವಾಗಿತ್ತು.
9
SHARES
26
VIEWS
ShareShareShare

1974ರ ಜು. 26ರಂದು ಕರಾವಳಿಯಲ್ಲಿ ಗಂಡಾಂತರಕಾರಿ ವಿದ್ಯಮಾನವೊಂದು ಜರಗಿತ್ತು. ಮೂರು ದಿನಗಳಿಂದ ಎಡೆಬಿಡದೆ ಸುರಿದ ಕುಂಭದ್ರೋಣ ಮಳೆ ಇಡೀ ಕರಾವಳಿ ಯನ್ನು ಮುಳುಗಿಸಿತ್ತು. ನೇತ್ರಾವತಿ, ಕುಮಾರಧಾರೆ, ಗುರುಪುರ, ಸ್ವರ್ಣಾ, ಸೀತಾ ಸೇರಿ ದಂತೆ ಎಲ್ಲ ನದಿಗಳು ಉಕ್ಕೇರಿ ಹರಿದು ಸಮೀ ಪದ ಪೇಟೆ ಪಟ್ಟಣಗಳನ್ನು ಆಪೋಷನ ತೆಗೆದು ಕೊಂಡಿದ್ದವು. ಆವತ್ತು ಸಾವಿರಾರು ಮನೆಗಳು ಉರುಳಿದ್ದವು, ಜೀವಹಾನಿ ಸಂಭವಿಸಿತ್ತು. ಇವ ತ್ತಿಗೂ ಒಂದು ಪೀಳಿಗೆಯ ಜನ ಆ ಮಹಾ ಪ್ರವಾ ಹವನ್ನು ನೆನಪಿಸಿಕೊಂಡು ನಡುಗುತ್ತಾರೆ. ಅಂಥ 1974ರ ಮಾರಿ ಬೊಲ್ಲಕ್ಕೆ ಇಂದಿಗೆ (ಜು. 26) ಐವತ್ತು ವರ್ಷ. ಆ ಮಾರಿ ಬೊಲ್ಲಕ್ಕೆ ಸಾಕ್ಷಿಯಾದ ಕೆಲವರು ನೆನಪುಗಳನ್ನು ಇಲ್ಲಿ ತೆರೆದಿಟ್ಟಿದ್ದಾರೆ.

8722552464 Astrloger

ಜಾಹೀರಾತು

1923ರಲ್ಲಿ ಮೊದಲ ಮಾರಿ ಬೊಲ್ಲ.

ಒಂದು ಶತಮಾನದ ಹಿಂದೆ ಅಂದರೆ 1923ರಲ್ಲಿಯೇ ಕರಾವಳಿಯ ಅತೀ ದೊಡ್ಡ ಪ್ರವಾಹ ಸೃಷ್ಟಿಯಾಗಿತ್ತು. ಆಗಲೂ ಇದೇ ರೀತಿ
ನದಿಗಳು ಉಕ್ಕಿ ತೀರದ ಪಟ್ಟಣಗಳನ್ನು ಮುಳು ಗಿಸಿದ್ದವು. ಆ ಮಾರಿ ಬೊಲ್ಲಕ್ಕೆ ಸಂಬಂಧಿಸಿ ಕುರುಹುಗಳು, ಐತಿಹ್ಯಗಳು ಸಿಗುತ್ತವೆ. ಆದರೆ, ಕಣ್ಣಾರೆ ಕಂಡವರು ಈಗ ಸಿಗುವುದು ಕಷ್ಟ. ಆದರೆ, 1974ರ ಮಾರಿ ಬೊಲ್ಲಕ್ಕೆ ಚಿತ್ರ ಸಾಕ್ಷಿಗಳಿವೆ. ಬೊಲ್ಲದ ಭಯಾನಕತೆಯನ್ನು ಅನುಭವಿಸಿದ ಒಂದು ಪೀಳಿಗೆಯೇ ನಮ್ಮ ಜತೆ ಗಿದೆ. ಈಗಲೂ ಜೋರಾಗಿ ಮಳೆ ಬಂದಾಗ ಅವರ ನೆನಪು 1974ಕ್ಕೆ ಓಡುತ್ತದೆ.

Muliya

ಜಾಹೀರಾತು

1974: ಎಲ್ಲೆಲ್ಲಿ ಅತೀ ಹೆಚ್ಚು ಹಾನಿ?
*ನೇತ್ರಾವತಿ-ಕುಮಾರಧಾರ ಸಂಗಮದ ಉಪ್ಪಿನಂಗಡಿ ಪಟ್ಟಣ.
*ನೇತ್ರಾವತಿ ತೀರದ ಪಾಣೆ ಮಂಗಳೂರು, ಬಂಟ್ವಾಳ
*ಗುರುಪುರ ನದಿ ತೀರದ ಜೋಕಟ್ಟೆ ಪ್ರದೇಶ
*ಸ್ವರ್ಣಾ ನದಿ ತೀರದ ಉಪ್ಪೂರು, ಕಲ್ಯಾಣಪುರ, ಹೆರ್ಗ
*ಉಡುಪಿ ನಗರದಲ್ಲೂ ಸಾಕಷ್ಟು ನಾಶ, ನಷ್ಟವಾಗಿತ್ತು
*ಉದ್ಯಾವರ, ಕಾಪು ಪ್ರದೇಶದಲ್ಲಿ ಮನೆಗಳೇ ಮುಳುಗಿದ್ದವು
*ಕುಂದಾಪುರ ತಾ|ನ 9 ಗ್ರಾಮಗಳು ನೀರಿನೊಳಗಿದ್ದವು!
ಇಡೀ ಉಪ್ಪಿನಂಗಡಿ ನೀರಲ್ಲಿ ಮುಳುಗಿತ್ತು!
ಆವತ್ತು ಬೆಳಗ್ಗೆ ನೇತ್ರಾವತಿ-ಕುಮಾರಧಾರೆ ಸಂಗಮ ಆಗಿತ್ತು. ಸಾಮಾನ್ಯವಾಗಿ ಸಂಗಮದ ಬಳಿಕ ನೀರು ಇಳಿಯುತ್ತದೆ. ಆದರೆ, ಆ ದಿನ ಏರುತ್ತಲೇ ಹೋಯಿತು. ಸಂಜೆ ಹೊತ್ತಿಗೆ ನಮ್ಮ ಮನೆಯಂಗಳಕ್ಕೆ ಬಂದ ನೀರು ರಾತ್ರಿಯಾಗುತ್ತಿ ದ್ದಂತೆಯೇ ಮನೆಯೊಳಗೇ ನುಗ್ಗಿತು. ಆಗ ದೋಣಿ ಮೂಲಕ ನಮ್ಮನ್ನು ಉಪ್ಪಿನಂಗಡಿ ಹೈಸ್ಕೂಲ್‌ ಕಟ್ಟಡಕ್ಕೆ ಸ್ಥಳಾಂತರಿಸಿದರು: ಎನ್ನುತ್ತಾರೆ ಉಪ್ಪಿನಂಗಡಿಯಲ್ಲಿ ವೈದ್ಯರಾಗಿರುವ ಡಾ.ಯತೀಶ್‌ ಶೆಟ್ಟಿ

ನಮ್ಮದು ಹೊಸ ಮನೆ. 1972ರಲ್ಲಿ ನಿರ್ಮಾಣ ಆಗಿತ್ತು. ನಾನಾಗ ಪ್ರಥಮ ಪಿಯುಸಿ ವಿದ್ಯಾರ್ಥಿ. ಮನೆಯಲ್ಲಿ ಒಟ್ಟು ಆರು ಮಂದಿ ಇದ್ದೆವು. ನಮ್ಮೆಲ್ಲರನ್ನು ದೋಣಿ ಮೂಲಕವೇ ರಕ್ಷಿಸಿದರು. ಇಂತಹ ಪ್ರವಾಹವೊಂದು ಬಂದಿತ್ತು ಅನ್ನುವುದನ್ನು ಈಗಿನ ಪೀಳಿಗೆ ನಂಬುವುದೇ ಕಷ್ಟ. ಇಡೀ ಪೇಟೆ ನೆರೆಯಿಂದ ಮುಳುಗಿ ಹೋಗಿತ್ತು. ಸಿಂಡಿಕೇಟ್‌ ಬ್ಯಾಂಕ್‌ ಇದ್ದ ಸ್ಥಳದ ತನಕವೂ ನೆರೆ ನೀರು ಆವರಿಸಿತ್ತು. ನಮ್ಮ ಮನೆ ಅರ್ಧ ಮುಳುಗಿತ್ತು. ಉಪ್ಪಿನಂಗಡಿ ದೇವಾಲಯದ ಗರ್ಭಗುಡಿ ಒಳಗೂ ನೀರು ಪ್ರವೇಶಿಸಿತ್ತು ಎಂದು ಯತೀಶ್‌ ಶೆಟ್ಟಿ ನೆನಪಿಸಿಕೊಂಡರು.
ನನ್ನ ತಂದೆ ಶೀನಪ್ಪ ಶೆಟ್ಟಿ ಅವರು ಹಳೆ ಬಸ್‌ ನಿಲ್ದಾಣದ ಬಳಿ ಬಾಡಿಗೆ ಕಟ್ಟಡದಲ್ಲಿ ಶಾಪ್‌ ಹೊಂದಿದ್ದರು. ನೆರೆಯಿಂದ ಆ ಕಟ್ಟಡ ಪೂರ್ತಿ ಧರೆಶಾಹಿಯಾಯಿತು. ಜತೆಗೆ ಕಟ್ಟಡ ಮಾಲಕ ನರಸಿಂಹ ಪೈ ಅವರ ಮನೆಯು ಕುಸಿದಿತ್ತು ಎಂದು ಡಾ| ಯತೀಶ್‌ ಶೆಣೈ ನೆನಪಿಸಿಕೊಂಡಿದ್ದಾರೆ.
ಬಿದ್ದ ಮನೆಗಳು,ಎಳೆ ಮಕ್ಕಳ ರಕ್ಷಣೆ
ಮಳೆ ಮತ್ತು ನೆರೆಯಿಂದಾಗಿ ಮಜೂರು, ಪಾದೂರು, ಕರಂದಾಡಿ ಪರಿಸರದಲ್ಲಿ ಹತ್ತಾರು ಮನೆಗಳು ಧರಾಶಾಯಿಯಾಗಿದ್ದವು. ನೆರೆ ಹೆಚ್ಚಿ ತೀವ್ರ ಅಪಾಯಕ್ಕೆ ಸಿಲುಕಿದ್ದ ಮಂಜುನಾಥ ನಾಯ್ಕ್‌ ಮತ್ತು ಅವರ ಮನೆಯಲ್ಲಿದ್ದ ಎಳೆಯ ಮಕ್ಕಳು ಸೇರಿದಂತೆ ಹಲವರನ್ನು ರಕ್ಷಿಸಿದ್ದು ಈಗಲೂ ನೆನಪಿಗೆ ಬರುತ್ತದೆ ಎನ್ನುತ್ತಾರೆ ಪಾದೂರು ಒಡಿಪೆನಿ ನಿವಾಸಿ ರತ್ನಾಕರ ಶೆಟ್ಟಿ ಅವರು. ಆವತ್ತು ಜೀವಭಯದಿಂದ ಒದ್ದಾಡುತ್ತಿದ್ದ ನಾನು ಮತ್ತು ಸಹೋದರ, ಸಹೋದರಿ ಸೇರಿದಂತೆ 7 ಮಂದಿಯನ್ನು ಊರಿನ ಹಿರಿಯರಾದ ರತ್ನಾಕರ ಶೆಟ್ಟಿ, ಸಂಜೀವ ಗುರ್ಮೆ ಮೊದಲಾದವರು ಹೆಗಲಿನಲ್ಲಿ ಹೊತ್ತುಕೊಂಡು ಹೋಗಿ ರಕ್ಷಿಸಿದ್ದರು ಎಂದು ಚಂದ್ರನಗರದ ಪದ್ಮಾವತಿ ನಾಯ್ಕ್‌ ನೆನಪಿಸಿಕೊಂಡಿದ್ದಾರೆ. ಅಂದು ನಾಗರ ಪಂಚಮಿಯಾಗಿದ್ದು ಎದೆ ಮಟ್ಟದವರೆಗೆ ನೀರಿನಲ್ಲಿ ನಡೆದುಕೊಂಡೇ ಹೋಗಿ ನಾಗ ದೇವರಿಗೆ ತನು ಅರ್ಪಿಸಿದ್ದೆವು ಎಂದರು ಜಗದೀಶ್‌ ರಾವ್‌ ಗುರ್ಮೆ.

ಜಾಹೀರಾತು

ಉಡುಪಿಯಲ್ಲಿ ಹಲವು ಮನೆ ನಾಶ
ಉಡುಪಿಯ ಶೆಟ್ಟಿಬೆಟ್ಟು ಪ್ರದೇಶದಲ್ಲಿ ಹತ್ತಾರು ಮಂದಿ ಅಂದು ಮನೆ ಕಳೆದುಕೊಂಡಿದ್ದರು. ಎಮ್ಮೆಗಳು, ಇತರ ಜಾನುವಾರುಗಳು, ಹಾರ್ಮೋನಿಯಂ ಸೇರಿದಂತೆ ನಾನಾ ವಸ್ತುಗಳು ನೆರೆಯಲ್ಲಿ ಕೊಚ್ಚಿ ಹೋಗುತ್ತಿರುವುದನ್ನು ಅಸ ಹಾಯಕವಾಗಿ ನೋಡಿದ್ದನ್ನು ಹಲವರು ನೆನ ಪಿಸಿಕೊಂಡಿದ್ದಾರೆ.
ಏನೇನು ನಾಶ? ಎಷ್ಟು ನಷ್ಟ ?
6 ಜನ ಪ್ರಾಣ ಕಳೆದುಕೊಂಡವರು
5000 ಪೂರ್ಣ ನಾಶವಾದ ಮನೆ
4000 ಭಾಗಶ: ನಾಶವಾದ ಮನೆ
11,000 ನಿರ್ವಸಿತರಾದವರು
172 ಮೃತ ಜಾನುವಾರುಗಳು
3500 ಹೆಕ್ಟೇರ್‌ ಕೃಷಿ ನಾಶ
2.72 ಕೋಟಿ ರೂ. ಒಟ್ಟು ನಷ್ಟ
ವಸ್ತುಗಳನ್ನು ಮೊದಲೇ ಸಾಗಿಸಿದ್ದೆವು
ನೇತ್ರಾವತಿ ನದಿ ರೌದ್ರ ರೂಪ ತಾಳಿದ್ದರಿಂದ ಪಾಣೆಮಂಗಳೂರು-ಬಂಟ್ವಾಳ ಪೇಟೆಯಲ್ಲಿ ಅಳೆತ್ತರಕ್ಕೆ ನೀರು ತುಂಬಿತ್ತು. ನೆರೆಯ ಸೂಚನೆ ಮೊದಲೇ ಲಭಿಸಿದ್ದ ಕಾರಣ ಅಗತ್ಯ ಸರಕುಗಳನ್ನು ಹೊತ್ತುಕೊಂಡೇ ಸುರಕ್ಷಿತ ಜಾಗಕ್ಕೆ ಹೋಗಿದ್ದೆವು ಎನ್ನುತ್ತಾರೆ 80ರ ಹರೆಯದ ಪಾಣೆಮಂಗಳೂರಿನ ಎನ್‌. ಪಾಂಡುರಂಗ ಪ್ರಭುಗಳು. ಆಗ ಪ್ರಭುಗಳು ರಿಕ್ಷಾ ಚಾಲಕರಾಗಿದ್ದರು. ನಾವು ಅಗತ್ಯ ವಸ್ತುಗಳನ್ನು ಹಿಡಿದುಕೊಂಡು ಮನೆ ಬಿಟ್ಟಿದ್ದೆವು. ಆದರೆ ನೆರೆ ಇಳಿದ ಬಳಿಕ ಹೋಗಿ ನೋಡಿದಾಗ ನದಿ ಕಿನಾರೆಯಲ್ಲಿದ್ದ ಹಲವರ ಮನೆ ಪಂಚಾಂಗ ಸಮೇತ ಸಂಪೂರ್ಣ ನಾಶವಾಗಿತ್ತು. ಪಾಣೆಮಂಗಳೂರು ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಂ ಬಾಂಧವರು ಮನೆಗಳನ್ನು ಕಳೆದುಕೊಂಡಿದ್ದರು. ಇಡೀ ಸಮಾಜ ಮುಂದೆ ನಿಂತು ಅವರಿಗೆ ಪುನ ರ್ವಸತಿ ಕಲ್ಪಿಸಿತು ಎನ್ನುತ್ತಾರೆ ಪ್ರಭುಗಳು.

ದೋಣಿಗಳು ಕೊಚ್ಚಿ ಹೋಗಿದ್ದವು
ನಾನಾಗ 10ನೇ ಕ್ಲಾಸ್‌. ಆವತ್ತು ಕಟ್ಟಿ ಹಾಕಿದ್ದ ದೋಣಿಗಳು ಕೊಚ್ಚಿಕೊಂಡು ಹೋಗಿದ್ದವು. ನೆರೆ ಒಂದೇ ಸಮನೆ ಏರುತ್ತಿತ್ತು. ಜನರನ್ನು ದೋಣಿಗಳ ಮೂಲಕ ರಕ್ಷಿಸಲಾಗಿತ್ತು. ಉದ್ಯಾವರ ಗ್ರಾಮದ ಅಂಕುದ್ರು ಭಟ್ರ ಮನೆಯ ವಿಶಾಲವಾದ ಹಟ್ಟಿಯಲ್ಲಿ ಸುಮಾರು 3-4 ಕುಟುಂಬಗಳು ಆಶ್ರಯ ಪಡೆದಿತ್ತು.
*ಪ್ರೊ|ವಿ.ಕೆ. ಉದ್ಯಾವರ
ಹೊಳೆದಂಡೆಗೆ ಮಡಲೇ ತಡೆ!
ನನಗೆ ಆಗ ಸುಮಾರು 20 ವರ್ಷ ಪ್ರಾಯ. ಕಟಪಾಡಿ ಏಣಗುಡ್ಡೆ ಗ್ರಾಮದ ವೆಸ್ಟ್‌ ಕೋಸ್ಟ್‌ ರಸ್ತೆಯ (ಹಳೆ ಎಂಬಿಸಿ ರಸ್ತೆ) ಪಶ್ಚಿಮ ಭಾಗದ ಕುದ್ರು ಭಾಗದಲ್ಲಿ ತೀವ್ರ ನೆರೆ ಬಾಧಿತವಾಗಿತ್ತು. ಆ ಭಾಗದ ಸುಮಾರು 10 ಕುಟುಂಬ ತೇಕಲ ತೋಟದಲ್ಲಿದ್ದ ಸುತ್ತು ಮಡಲಿನ ನಮ್ಮ ಮನೆ ಹಾಗೂ ವಿಶಾಲವಾದ ಹಟ್ಟಿಯಲ್ಲಿ ಆಶ್ರಯವನ್ನು ಪಡೆದಿದ್ದರು. ಒಬ್ಬಾಕೆಯ ಹೆರಿಗೆಯೂ ಅಲ್ಲೇ ನಡೆದಿತ್ತು. ಹೊಳೆಗೆ ಮಣ್ಣಿನ ದಂಡೆ ಮಡಲುಗಳೇ ತಡೆಯಾಗಿತ್ತೇ ವಿನಃ ಈಗಿನಂತೆ ನದಿ ದಂಡೆ ಇರಲಿಲ್ಲ.

SendShare4Share
Previous Post

ಪುತ್ತೂರು: ನೆಹರು ನಗರದಲ್ಲಿ ಮತ್ತೆ ಗಾಂಜಾ ವಾಸನೆ ಬರುತ್ತಿದೆಯಂತೆ……!? ಪೋಲಿಸ್ ಇಲಾಖೆಗೆ ತಲುಪಿಲ್ಲವೇ…..?

Next Post

ಬೆಂಗಳೂರು: ಹಿಂದು ಮುಖಂಡ ಪುನೀತ್ ಕೆರೆಹಳ್ಳಿ ಬಂಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಂಗಳೂರು: ಹಿಂದು ಮುಖಂಡ ಪುನೀತ್ ಕೆರೆಹಳ್ಳಿ ಬಂಧನ

ಬೆಂಗಳೂರು: ಹಿಂದು ಮುಖಂಡ ಪುನೀತ್ ಕೆರೆಹಳ್ಳಿ ಬಂಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..