• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ಎನ್ನುವ ವಿಶಿಷ್ಟ ಕಾರ್ಯಕ್ರಮ ಯಶಸ್ವಿ

ಮಂಗಳೂರು: ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ಎನ್ನುವ ವಿಶಿಷ್ಟ ಕಾರ್ಯಕ್ರಮ ಯಶಸ್ವಿ

September 3, 2024
ಹೊಸ ಪಕ್ಷ ಕಟ್ತನಿ, ಮುಂದಿನ ಬಾರಿ ನಾನೇ ಸಿಎಂ -ಯತ್ನಾಳ್

ಹೊಸ ಪಕ್ಷ ಕಟ್ತನಿ, ಮುಂದಿನ ಬಾರಿ ನಾನೇ ಸಿಎಂ -ಯತ್ನಾಳ್

March 9, 2026
ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

March 9, 2026
ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

March 9, 2026
ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

March 9, 2026
ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

March 9, 2026
ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

March 9, 2026
ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

March 7, 2026
ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

March 7, 2026
ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

March 7, 2026
ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

March 7, 2026
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

March 6, 2026
ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

March 3, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, March 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

    ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

    ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

    ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

    ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

    ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

    ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

    ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

    ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

    ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

    ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

    ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

    ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

    ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಈಶ್ವಮಂಗಲ

ಮಂಗಳೂರು: ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ಎನ್ನುವ ವಿಶಿಷ್ಟ ಕಾರ್ಯಕ್ರಮ ಯಶಸ್ವಿ

by ಪ್ರಜಾಧ್ವನಿ ನ್ಯೂಸ್
September 3, 2024
in ಈಶ್ವಮಂಗಲ, ಉಡುಪಿ, ಉಪ್ಪಿನಂಗಡಿ, ಉಳ್ಳಾಲ, ಕಡಬ, ಕಾಸರಗೋಡು, ಕುಂದಾಪುರ, ಕುಂಬ್ರ, ಜಿಲ್ಲೆ, ಜ್ಯೋತಿಷ್ಯ, ದಕ್ಷಿಣ ಕನ್ನಡ, ಧರ್ಮಸ್ಥಳ, ಧಾರ್ಮಿಕ, ನೆಲ್ಯಾಡಿ, ಪುಣಚ, ಪುತ್ತೂರು, ಪ್ರಾದೇಶಿಕ, ಬಂಟ್ವಾಳ, ಬೆಳ್ತಂಗಡಿ, ಬೆಳ್ಳಾರೆ, ಮಂಗಳೂರು, ಮಡಿಕೇರಿ, ಮಾಣಿ, ಮೂಡಬಿದಿರೆ, ವಿಟ್ಲ, ಸವಣೂರು, ಸುಬ್ರಹ್ಮಣ್ಯ, ಸುಳ್ಯ
0
ಮಂಗಳೂರು: ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ಎನ್ನುವ ವಿಶಿಷ್ಟ ಕಾರ್ಯಕ್ರಮ ಯಶಸ್ವಿ
42
SHARES
120
VIEWS
ShareShareShare

ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ವತಿಯಿಂದ ಆಯೋಜಿಸಲಾದ ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ಎನ್ನುವ ವಿಶಿಷ್ಟ ಕಾರ್ಯಕ್ರಮ ಮಂಗಳೂರಿನ ಕಾವೂರು ಸಹಕಾರಿ ಸದನದಲ್ಲಿ ದಿನಾಂಕ 01.09.2024 ರಂದು ನಡೆಯಿತು.

vishnu studio

ಜಾಹೀರಾತು

ಕಾರ್ಯಕ್ರಮದಲ್ಲಿ ಖ್ಯಾತ ವಾಗ್ಮಿಗಳು ಹಾಗೂ ಹಿಂದೂ ಮುಖಂಡರಾದ ಶ್ರೀಕಾಂತ್ ಶೆಟ್ಟಿ, ಕಾರ್ಕಳ ಅವರು ಮಾತನಾಡಿ ದೈವಾರಾಧನೆ ಎಂದು ನಂಬಿಕೆಯಾಗಿ ಉಳಿದಿಲ್ಲ ದಂಧೆಯಾಗಿದೆ. ತುಳುನಾಡಿನ ದೈವಗಳ ಹೆಸರಿನಲ್ಲಿ ದಂಧೆ ನಡೆಯುತ್ತಿದೆ. ಯಾವ ಸಮಾಜ ನಂಬಿಕೆ, ಕೌಟುಂಬಿಕ ಪದ್ಧತಿ, ಧಾರ್ಮಿಕ ಸಂಸ್ಕೃತಿ ಯ ಹಿರಿಮೆಯನ್ನು ದೈವರಾಧನೆಯ ಮೂಲಕ ಎತ್ತಿ ಹಿಡಿದಿತ್ತೋ ಇಂದು ಅದೇ ಸಮಾಜದಲ್ಲಿ ದೈವರಾಧನೆಯ ವ್ಯಾಪಾರಿಕರಣದಿಂದ ಹಲವಾರು ಕುಟುಂಬಗಳು ನಾಶವಾಗಿದೆ.

ದೈವಾರಾಧನೆ ಯಾವ ಹಂತಕ್ಕೆ ತಲುಪಿದೆ ಎಂಬುದನ್ನು ಹಿಂದೂ ಸಮಾಜ ಯೋಚಿಸಬೇಕು ಎಂದರು. ದೈವ ನಂಬಿಕೆಗಳು ಇಂದು ದುಡ್ಡು ಮಾಡುವ ಸಾಧನವಾಗಿದೆ. ದೈವಾರಾಧನೆ ಹೆಸರಿನಲ್ಲಿ ನಡೆಯುತ್ತಿರುವ ದಂಧೆ ನಿಲ್ಲದೆ ಹೋದಲ್ಲಿ ತುಳುನಾಡಿನ ಮೂಲ ನಂಬಿಕೆಗಳು ನಾಶವಾಗಲಿದೆ. ಪೊಸತ್ ತೋಡಡ, ಪರತ್ ನಿಗಿಪಡ ಎಂಬ ದೈವ ನುಡಿಯಂತೆ ನಾವು ಸಾಗಬೇಕಾಗಿದೆ. ದೈವಾರಾಧನೆಯ ಸಾಂಸ್ಕೃತೀಕರಣವನ್ನು ತಡೆಯಬೇಕು. ದೈವಗಳು ನಮ್ಮ ನಂಬಿಕೆಯ ಭಾಗವೇ ಹೊರತು ಮನೋರಂಜನಾ ಚಟುವಟಿಕೆಯಲ್ಲ. ಯಾವುದೇ ಒಂದು ವಸ್ತು ಅತಿಯಾದಲ್ಲಿ ವಿಷವಾಗುತ್ತದೆ.

ದೈವದ ಕೊಡಿಯಡಿಯಲ್ಲಿ ಫೋಟೋಗ್ರಫಿ, ವಿಡಿಯೋಗ್ರಫಿ ನಿಷೇಧಿಸಬೇಕು. ಪಡುಬಿದ್ರೆಯ ಬ್ರಹ್ಮ ಸ್ಥಾನದಲ್ಲಿ ಇಂದಿಗೂ ಫೋಟೋ, ವಿಡಿಯೋಗೆ ಅವಕಾಶ ಮಾಡಿಕೊಟ್ಟಿಲ್ಲ, ಏಕೆಂದರೆ ಇದು ಪೂರ್ವಕಾಲದ ಪದ್ಧತಿ. ಇದೇ ರೀತಿಯ ಕಟ್ಟುಕಟ್ಟಲೆ ತುಳುನಾಡಿನ ಎಲ್ಲಾ ದೈವಸ್ಥಾನಗಳಲ್ಲಿ ಬರಬೇಕು ಎಂದು ವಿನಂತಿಸಿದರು.

ನಾವು ಸಂಘಟನಾತ್ಮಕವಾಗಿ ಮುಂದುವರೆದು, ತುಳುನಾಡಿನ ಎಲ್ಲಾ ದೈವಸ್ಥಾನಗಳಿಗೆ ಭೇಟಿ ನೀಡಿ ಫೋಟೋ ವಿಡಿಯೋಗಳನ್ನು ತೆಗೆದರೆ ಯಾವ ರೀತಿಯ ಅಪಾಯ, ಅವಮಾನ, ದೈವ ನಿಂದನೆ ಆಗುತ್ತದೆ ಎಂಬುದನ್ನು ಅವರಿಗೆ ಮನವರಿಕೆ ಮಾಡಬೇಕು ಎಂದು ಸಂಘಟನೆಗೆ ಸಲಹೆ ನೀಡಿದರು.

ಹಿರಿಯ ದೈವ ನರ್ತಕರು ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಲೋಕಯ್ಯ ಸೇರಾ ಅವರು ಮಾತನಾಡಿ ದೈವಾರಾಧನೆ ಈಗ ಹಿಂದಿನಂತಿಲ್ಲ.‌ ಕಾಲ ಬದಲಾಗುತ್ತಿದ್ದಂತೆ ಈಗ ದೈವಾರಾಧನೆಯೂ ಬದಲಾಗುತ್ತಿದೆ. ಜನರಲ್ಲಿ ಈ ಹಿಂದೆ ಇದ್ದ ಭಯ ಭಕ್ತಿ ಈಗ ಮಾಯವಾಗಿದೆ. ಹಿರಿಯ ದೈವ ನರ್ತಕರಿಗೆ ಈ ಕಾಲದಲ್ಲಿ ಬೆಲೆಯಿಲ್ಲದಂತಾಗುತ್ತಿದೆ.

ನೇಮ ನಡೆಸುವವರು ನಿಯಮ ಬದ್ಧವಾದ ನೇಮಕ್ಕಿಂತ ಅಬ್ಬರದ ನೇಮ ಅಪೇಕ್ಷಿಸುತ್ತಿದ್ದಾರೆ, ಇದರಿಂದಾಗಿ ಯುವ ದೈವ ನರ್ತಕರು ಅನಿವಾರ್ಯವಾಗಿ ಬಣ್ಣಗಾರಿಕೆ, ಕುಣಿತ, ವೇಷಭೂಷಣ ಇಲ್ಲೆಲ್ಲಾ ಬದಲಾವಣೆ ತರುವಂತಾಗಿದೆ.

ನೇಮ ಒಪ್ಪಿಸುವ ಮನೆಯವರು, ಗುತ್ತಿನವರು ತಮ್ಮ ಮನೆಯ, ಊರಿನ ದೈವಗಳಿಗೆ ಹೀಗೆಯೇ ನೇಮ ನಡೆಯಬೇಕು ಎಂದು ಹೇಳಿದ್ದಲ್ಲಿ ದೈವ ಚಾಕಿರಿಯವರು ಅದೇ ರೀತಿ ಮಾಡುವ ಅನಿವಾರ್ಯತೆಗೆ ಸಿಲುಕುತ್ತಾರೆ, ಆಗ ಖಂಡಿತಾ ಬದಲಾವಣೆ ಸಾಧ್ಯವಿದೆ. ದೈವಗಳು ಕೊಡಿಯಡಿ ಬಿಟ್ಟು ಬೀದಿಬದಿ, ನಾಟಕ, ಸಿನೇಮಾದಲ್ಲಿ ಬರುತ್ತಿರುವುದು ಆತಂಕಕಾರಿ ಬೆಳವಣಿಗೆ.‌ ಇದನ್ನು ತಡೆಯಲು ದೈವ ನರ್ತಕ ಸಮುದಾಯ ನಿಮ್ಮ ಸಂಘಟನೆಗೆ ಪೂರ್ಣ ಸಹಕಾರ ನೀಡಲು ಬದ್ಧವಾಗಿದೆ ಎಂದರು.

Muliya

ಜಾಹೀರಾತು

ಮಧ್ಯಸ್ಥರಾದ ಮನ್ಮಥ ಶೆಟ್ಟಿ ಅವರು ಮಾತನಾಡಿ, ದೈವಾರಾಧನೆಯಲ್ಲಿ ಮಧ್ಯಸ್ಥನ ಪಾತ್ರ ಭಾರೀ ಪ್ರಮುಖವಾಗಿದೆ. ಇತ್ತೀಚೆಗೆ ಕೆಲವರು ದೈವಾರಾಧನೆಯಲ್ಲಿ ಮಧ್ಯಸ್ಥರು ಇತ್ತೀಚೆಗೆ ಸೇರ್ಪಡೆಗೊಂಡಿದ್ದಾರೆ ಎಂದು ವಾದಿಸುತ್ತಾರೆ. ಅದು ತಪ್ಪು ಮದಿಪು ಎನ್ನುವುದು ಆರಂಭದಿಂದಲೂ ಇತ್ತು. ಇಂದು ಮದಿಪುವವ ಎನ್ನುವ ಬದಲು ಮಧ್ಯಸ್ಥ ಎನ್ನುತ್ತಾರೆ.

ದೈವ ಕಲದಲ್ಲಿ ಮದಿಪು ಎನ್ನುವ ಪದಕ್ಕೆ ಭಾರೀ ಶಕ್ತಿಯಿದೆ. ಆದರೆ ಇಂದಿನ ಯುವ ಪೀಳಿಗೆ ಅದನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ಯೂಟ್ಯೂಬ್ ನೋಡಿ ಬಾಯಿಪಾಠ ಮಾಡಿಯೋ, ಪುಸ್ತಕದಿಂದ ಕಂಠಪಾಠ ಮಾಡಿಕೊಂಡು ಬಂದು ದೈವ ಕಲದಲ್ಲಿ ಮ್ಯಾಚಿಂಗ್ ವಸ್ತ್ರ ಧರಿಸಿ ನಿರರ್ಗಳವಾಗಿ ಏಳೆಂಟು ನಿಮಿಷ ಕಥೆ ಹೇಳುತ್ತಾರೆ.

Poorna squash

ಜಾಹೀರಾತು

ಇದು ತಪ್ಪು, ದೈವದ ಕಟ್ಟುಕಟ್ಟಳೆ, ಹಿನ್ನಲೆ, ವಿವಿಧ ಹಂತಗಳನ್ನು ತಿಳಿದುಕೊಳ್ಳದೆ ಸಾಮಾಜಿಕ ಜಾಲತಾಣದಲ್ಲಿ ಸ್ಟಾರ್ ಆಗಲು ಪ್ರಯತ್ನಿಸುತ್ತಿರುವುದು ಆತಂಕಕಾರಿ ಬೆಳವಣಿಗೆ. ಇಂದು ಮಧ್ಯಸ್ಥರೊಂದಿಗೆ ರೀಲ್ಸ್ ವಿಡಿಯೋ ಮಾಡಲು, ಫೋಟೋ ತೆಗೆದು ವೈರಲ್‌ ಮಾಡಲೆಂದೇ ತಮ್ಮೊಂದಿಗೆ ಸಹಾಯಕರನ್ನು ಕರೆದುಕೊಂಡು ಬರುವ ಸ್ಥಿತಿಗೆ ನಾವು ತಲುಪಿರುವುದು ವಿಷಾದನೀಯ. ದೈವ ನಂಬಿಕೆ ಉಳಿಸುವತ್ತ ನಾವು ಚಿಂತಿಸಬೇಕಿದೆ ಎಂದರು.

ದೈವ ನಂಬಿಕೆಗಳ ವಿರುದ್ಧ ಆಗುತ್ತಿರುವ ಅವಮಾನ, ನಿಂದನೆಗಳನ್ನು ಕಾನೂನಾತ್ಮಕವಾಗಿ ಹೇಗೆ ಎದುರಿಸಬಹುದು ಎಂಬ ವಿಚಾರದಲ್ಲಿ ಮಾತನಾಡಿದ ಖ್ಯಾತ ವಾಗ್ಮಿ ಹಾಗೂ ವಕೀಲರಾದ ಸಹನಾ ಕುಂದರ್ ಸೂಡಾ ಅವರು, ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾದಾಗ ಕಾನೂನಿನಲ್ಲಿ ಶಿಕ್ಷಿಸುವ ಅವಕಾಶವಿದೆ.‌

ಸಂಘರ್ಷ ಬಿಟ್ಟು ಕಾನೂನು ಮಾರ್ಗದಲ್ಲಿ ಹೋದರೆ ದೈವ ನಂಬಿಕೆಯ ಪರವಾಗಿ ಪರಿಣಾಮಕಾರಿಯಾದ ಬದಲಾವಣೆಗಳು ಸಾಧ್ಯ ಎಂದರು. ಈಗ ದೈವದ ಕಲಗಳಿಗೆ ಹೋಗುವ ತಾಯಂದಿರು, ಹೆಣ್ಣು ಮಕ್ಕಳು ಜಾಗೃತರಾಗಿರಬೇಕು. ದೈವದ ಕಾರಣಿಕದ ಬಗ್ಗೆ ಮಕ್ಕಳಿಗೆ ತಿಳಿಹೇಳಬೇಕು, ನಾವೇ ಮುಂದೆ ನಿಂತು ಫೋಟೋ, ವಿಡಿಯೋ ತೆಗೆದರೆ ಯಾವ ಸಂದೇಶ ತಲುಪುತ್ತದೆ ಎಂದು ಪ್ರಶ್ನಿಸಿದರು.

ಕಾರ್ಯಕ್ರಮದ ಕೊನೆಯ ಅವಧಿಯಲ್ಲಿ ತಮ್ಮಣ್ಣ ಶೆಟ್ಟಿ ಅವರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.‌ ಸಂವಾದದಲ್ಲಿ ದೈವಾರಾಧನೆಯಲ್ಲಿ ಇತ್ತೀಚೆಗೆ ನಡೆಯುತ್ತಿರುವ ಬದಲಾವಣೆ ಮತ್ತು ಅದಕ್ಕೆ ಪರಿಹಾರ, ದೈವರಾಧನೆಯ ಕಟ್ಟುಪಾಡು, ಸಿನೇಮಾ ನಾಟಕಗಳಲ್ಲಿ ದೈವಗಳನ್ನು ತೋರಿಸದಂತೆ ಮಾಡಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

camera center ad

ಜಾಹೀರಾತು

ಇನ್ನಾದರೂ ಸಿನೇಮಾ, ಯಕ್ಷಗಾನ, ನಾಟಕಗಳಲ್ಲಿ ದೈವಗಳನ್ನು ಥೇಟ್ ಕೊಡಿಯಡಿಯ ವೇಷಭೂಷಣಗಳ ಬದಲು ಕೇವಲ ಸಿಂಬಾಲಿಕ್ ಆಗಿ ತೋರಿಸಲು ಪ್ರಯತ್ನಿಸಿ ಮತ್ತು ಟ್ಯಾಬ್ಲೋ, ಶಾಲಾ‌ ಕಾರ್ಯಕ್ರಮಗಳಲ್ಲಿ ದೈವಗಳನ್ನು ಪ್ರದರ್ಶನದ ವಸ್ತು, ಸಾಂಸ್ಕೃತಿಕ ಕಾರ್ಯಕ್ರಮವಾಗಿ ತೋರಿಸುವುದನ್ನು ನಿಲ್ಲಿಸಿ ಎಂಬುದು ಕಾರ್ಯಕ್ರಮಕ್ಕೆ ಆಗಮಿಸಿದವರ ಒತ್ತಾಯವಾಗಿತ್ತು.

ಪೊಸತ್ ತೋಡಡೆ, ಪರತ್ ನಿಗಿಪಡೆ ಎಂಬ ದೈವ ನುಡಿಯಂತೆ ಕಾರ್ಯಕ್ರಮಕ್ಕೆ ಬಂದವರಿಂದ ಪೊಸತೆನ್ ತೋಡುಜಾ, ಪರತೆನ್ ನಿಗಿಪುಜಾ ಎಂಬ ವಾಗ್ದಾನದ ರೂಪದಲ್ಲಿ ಸಹಿ ಸಂಗ್ರಹ ಮಾಡಲಾಗಿದ್ದು, ಇದಕ್ಕೂ ಆಗಮಿಸಿದವರು ಮೆಚ್ಚುಗೆ ಸೂಚಿಸಿದರು.

ಜೀವಿತಾ ಕುತ್ತಾರ್ ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ಖ್ಯಾತ ವಾಗ್ಮಿಗಳು ಹಾಗೂ ಹಿಂದೂ ಸಂಘಟನೆಯ ಪ್ರಮುಖರಾದ ಶ್ರೀಕಾಂತ್ ಶೆಟ್ಟಿ ಕಾರ್ಕಳ, ವಿಶ್ವ ಹಿಂದೂ ಪರಿಷತ್ ಮುಖಂಡರಾದ ಶರಣ್ ಪಂಪ್ವೆಲ್, ಹಿರಿಯ ದೈವ ನರ್ತಕರಾದ ಲೋಕಯ್ಯ ಸೇರಾ, ಚಂದು ನಲಿಕೆ, ಎನ್‌ಕೆ ಸಾಲಿಯಾನ್, ಮಧ್ಯಸ್ಥರಾದ ಮನ್ಮಥ ಶೆಟ್ಟಿ ಪುತ್ತೂರು, ಶಾಸಕರಾದ ವೇದವ್ಯಾಸ್ ಕಾಮತ್, ಮುಂಬೈಯ ಚಂದ್ರಕಾಂತ್ ಶೆಟ್ಟಿ ಬೆರ್ಮೊಟ್ಟು, ಖ್ಯಾತ ವಕೀಲರಾದ ಸಹನಾ ಕುಂದರ್ ಸೂಡಾ, ತುಳು ಅಕಾಡೆಮಿಯ ಮಾಜಿ ಅಧ್ಯಕ್ಷರಾದ ದಯಾನಂದ್ ಕತ್ತಲ್ಸಾರ್, ಸಾಂಸ್ಕೃತಿಕ ವಿಮರ್ಶಕರಾದ ತಮ್ಮಣ್ಣ ಶೆಟ್ಟಿ, ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ ಇದರ ಗೌರವಾಧ್ಯಕ್ಷರಾದ ದಿಲ್‌ರಾಜ್ ಆಳ್ವ, ಅಧ್ಯಕ್ಷರಾದ ಭರತ್ ಬಳ್ಳಾಲ್‌ಭಾಗ್, ಕಾರ್ಯಕ್ರಮದ ಸಂಯೋಜಕರಾದ ಧನುಷ್ ಶೆಟ್ಟಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ashwinistudioputtur

ಜಾಹೀರಾತು

SendShare17Share
Previous Post

ಪೆರ್ನೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಶಾಸಕ ಅಶೋಕ್ ರೈಯವರಿಂದ ಪರಿಶೀಲನೆ

Next Post

ಪ್ರೀತಿ ಹೆಸರಿನಲ್ಲಿ ಇಸ್ಲಾಂಗೆ ಮತಾಂತರಕ್ಕೆ ಯತ್ನಿಸಿ, ಕಪಾಳಕ್ಕೆ ಹೊಡೆದು ಕಿರುಕುಳ ಕೊಟ್ಟ ವೈದ್ಯನಿಗೆ ನ್ಯಾಯಾಂಗ ಬಂಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪ್ರೀತಿ ಹೆಸರಿನಲ್ಲಿ ಇಸ್ಲಾಂಗೆ ಮತಾಂತರಕ್ಕೆ ಯತ್ನಿಸಿ, ಕಪಾಳಕ್ಕೆ ಹೊಡೆದು ಕಿರುಕುಳ ಕೊಟ್ಟ ವೈದ್ಯನಿಗೆ ನ್ಯಾಯಾಂಗ ಬಂಧನ

ಪ್ರೀತಿ ಹೆಸರಿನಲ್ಲಿ ಇಸ್ಲಾಂಗೆ ಮತಾಂತರಕ್ಕೆ ಯತ್ನಿಸಿ, ಕಪಾಳಕ್ಕೆ ಹೊಡೆದು ಕಿರುಕುಳ ಕೊಟ್ಟ ವೈದ್ಯನಿಗೆ ನ್ಯಾಯಾಂಗ ಬಂಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..